ಮಡಿಕೇರಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʻಯುವನಿಧಿʼಯಿಂದ (Yuvanidhi) ತನ್ನ ಖಾತೆಗೆ ಪ್ರತಿ ತಿಂಗಳು ಜಮೆಯಾಗುತ್ತಿದ್ದ 3,000 ರೂ. ಹಣ ಕೂಡಿಟ್ಟು ಮುಂದಿನ ಭವಿಷ್ಯಕ್ಕಾಗಿ ವಿದ್ಯಾರ್ಥಿನಿಯೋರ್ವಳು ಲ್ಯಾಪ್ಟಾಪ್ (LapTop) ಖರೀದಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ.
ಸೋಮವಾರಪೇಟೆ ಪಟ್ಟಣದ ನಿವಾಸಿಯೂ ಆಗಿರುವ ಪದವೀಧರೆ ಇಶಾ ಆಸಿಫ್ ಯನ್ನ ಖಾತೆಗೆ ಬಂದ ಗ್ಯಾರಂಟಿ ಹಣ (Guarantee Scheme Money) ಕೂಡಿಟ್ಟು ಲ್ಯಾಪ್ಟಾಪ್ ಖರೀದಿಸಿದ್ದಾರೆ. ಅಲ್ಲದೇ ಈ ರೀತಿ ಉಚಿತವಾಗಿ ಬರುವ ಹಣವನ್ನು ಕೂಡಿಟ್ಟು ಪೋಷಕರಿಗೆ ಹೆಚ್ಚಿನ ಹೊರೆಯಾಗದಂತೆ ಮುಂದಿವ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವಂತೆ ಇಶಾ ಸಲಹೆ ನೀಡಿದ್ದಾರೆ. ಇದನ್ನೂ ಓದಿ: Ramanagara | ಸರ್ಕಾರದ ಇ ಸ್ವತ್ತು ಸಾಫ್ಟ್ವೇರ್ ಹ್ಯಾಕ್ ಮಾಡಿ ದಾಖಲೆಗಳ ತಿದ್ದುಪಡಿ – ಮೂವರ ಬಂಧನ
ಈ ಹಿನ್ನೆಲೆಯಲ್ಲಿ ಯುವನಿಧಿ ಗ್ಯಾರಂಟಿ ಹಣದಿಂದ ಲ್ಯಾಪ್ಟಾಪ್ ಖರೀದಿಸಿದ ವಿದ್ಯಾರ್ಥಿನಿಯನ್ನು ಸೋಮವಾರಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯಲ್ಲಿ ಅಭಿನಂದಿಸಲಾಯಿತು. ಇದನ್ನೂ ಓದಿ: Vijayapura | ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು
ಸೋಮವಾರಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜಿ.ಎಂ ಕಾಂತರಾಜ್ ತಾಲ್ಲೂಕು ಪಂಚಾಯಿತಿ ಸಿ.ಇ.ಒ ಪರಮೇಶ್ ಕುಮಾರ್ ಹಾಗು ಸರ್ವ ಸದಸ್ಯರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!