ಬಿಜೆಪಿಯವರದ್ದು ಮೊಟ್ಟೆಯ ಕಮಿಷನ್‍ನಂತೆ, ಶಾಲಾ ಬಟ್ಟೆಯಲ್ಲೂ ಕಮಿಷನ್ ಲೂಟಿಯೇ?: ಕಾಂಗ್ರೆಸ್

Public TV
1 Min Read

ಬೆಂಗಳೂರು: ವಿದ್ಯಾರ್ಥಿಗಳ (Students) ಸಮವಸ್ತ್ರದಲ್ಲೂ (Uniform) 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ (B.C Nagesh) ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಇದರಲ್ಲೂ ಮೊಟ್ಟೆಯ ಕಮಿಷನ್‍ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಎಂದು ಕಾಂಗ್ರೆಸ್ (Congress) ಸರಣಿ ಟ್ವೀಟ್ ಮೂಲಕ ಬಿಜೆಪಿ (BJP) ವಿರುದ್ಧ ಚಾಟಿ ಬೀಸಿದೆ.

ಟ್ವೀಟ್‍ನಲ್ಲಿ ಏನಿದೆ?
ವಿದ್ಯಾರ್ಥಿಗಳ ಸಮವಸ್ತ್ರದಲ್ಲೂ 40% ಲೂಟಿ ಮಾಡಿಲಾಗಿದೆಯೇ ಬಿ.ಸಿ ನಾಗೇಶ್ ಅವರೇ? ಸಮವಸ್ತ್ರ ಕೊಡುವುದೇ ವಿಳಂಬವಾಗಿದೆ, ಅದರಲ್ಲೂ ತೆಳುವಾದ ಕಳಪೆ ಬಟ್ಟೆಗಳನ್ನು ನೀಡಲಾಗಿದೆ. ಅರ್ಧ ವರ್ಷ ಕಳೆದಿದೆ, ಇನ್ನರ್ಧ ವರ್ಷ ಬಾಳಿಕೆ ಬಂದರೆ ಸಾಕು ಎಂಬ ಸರ್ಕಾರದ ಆಲೋಚನೆಯೇ? ಮೊಟ್ಟೆಯ ಕಮಿಷನ್‍ನಂತೆ, ಬಟ್ಟೆಯಲ್ಲೂ ಕಮಿಷನ್ ಲೂಟಿಯೇ ಬಿಜೆಪಿ ಸರ್ಕಾರ? ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ರು ಸಿದ್ದರಾಮಯ್ಯ

bjP

ಆಸ್ಪತ್ರೆಗಳಿಗೆ ವಿದ್ಯುತ್ ಕಡಿತಗೊಳ್ಳುತ್ತದೆ, ಕಳಪೆ ವೆಂಟಿಲೇಟರ್‌ಗಳು ಕೈಕೊಡುತ್ತಿವೆ, ಈಗ ಔಷಧ ಪೂರೈಕೆಯೂ ನಿಂತಿದೆ. ಸರ್ಕಾರಿ ಆಸ್ಪತ್ರೆಗಳ ಔಷಧ ಪೂರೈಕೆದಾರರಿಗೆ ಹಣ ಬಿಡುಗಡೆ ಮಾಡದ ಪರಿಣಾಮವಿದು. 40% ಕಮಿಷನ್ ಸರ್ಕಾರ ಇಷ್ಟೊಂದು ದಿವಳಿಯಾಗಿದೆಯೇ? ಸುಧಾಕರ್ ಎಂಬ ಅಸಮರ್ಥ ಸಚಿವರ ದುರಾಡಳಿತದಲ್ಲಿ ಜನ ಸಾವಿನ ಮನೆ ಸೇರುವಂತಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ

ಪೊಲೀಸರನ್ನು ಸರ್ಕಾರದ ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳಲು ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆಯೇ ಸರ್ಕಾರ? ಪೊಲೀಸ್ ಇಲಾಖೆಯ ಶಿಸ್ತು ಪ್ರಾಧಿಕಾರದಲ್ಲಿ ಮೇಲ್ಮನವಿ ಸಲ್ಲಿಸುವ ಹಕ್ಕು ಕಿತ್ತುಕೊಳ್ಳುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಆರಗ ಜ್ಞಾನೇಂದ್ರ ಅವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ. ಇದನ್ನೂ ಓದಿ: ಮಹಿಳಾ ಪೇದೆ ಹತ್ಯೆ ಪ್ರಕರಣ – ಠಾಣೆಯಲ್ಲೇ ಇದ್ಳು ಹಂತಕಿ!

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *