ಬಸ್ ಬಾರದಕ್ಕೆ ಸಾರಿಗೆ ಅಧಿಕಾರಿಗೆ ವಿದ್ಯಾರ್ಥಿಗಳ ತರಾಟೆ

Public TV
1 Min Read

ಬೀದರ್: ಸರಿಯಾದ ಸಮಯಕ್ಕೆ ಬಸ್ ಬರದ ಕಾರಣ ರಸ್ತೆ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ (Humnabad) ಬಳಿ ನಡೆದಿದೆ.ಇದನ್ನೂ ಓದಿ: ಕೋಲಾರ ನಗರದ 7ಕ್ಕೂ ಹೆಚ್ಚು ಮಳಿಗೆಗಳಲ್ಲಿ ಸರಣಿ ಕಳ್ಳತನ – ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ

ಕಟಕಚಿಂಚೊಳ್ಳಿ, ಸಿಕಿಂದ್ರಾಬಾದ್, ಸುಲ್ತಾನಬಾದ್ ಗ್ರಾಮಕ್ಕೆ ಬಸ್ ಬಾರದಿದ್ದಕ್ಕೆ ಭಾಲ್ಕಿ ಟೂ ಹುಮ್ನಾಬಾದ್ ಮುಖ್ಯರಸ್ತೆ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಸಾರಿಗೆ ಅಧಿಕಾರಿಯನ್ನೇ ವಿದ್ಯಾರ್ಥಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಹುತೇಕ ಸಲ ಬಸ್ ಬಾರದ ಕಾರಣಕ್ಕೆ ನಡೆದುಕೊಂಡು ಶಾಲೆಗೆ ಹೋಗಬೇಕಾದ ಸ್ಥಿತಿ ಎದುರಾಗಿದೆ. ಹೀಗಾಗಿ ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆಗೆ ಎಬಿವಿಪಿ ಕಾರ್ಯಕರ್ತರು ಸಾಥ್ ನೀಡಿದರು.ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ನೇಮಕ ವಿಚಾರದಲ್ಲಿ ಗಲಾಟೆ – ಕೇಂದ್ರಕ್ಕೆ ಸ್ಥಳೀಯರಿಂದಲೇ ಬೀಗ

Share This Article