ನಿಲ್ದಾಣದಲ್ಲಿ ಬಸ್‍ಗಳು ನಿಲುಗಡೆಯಾಗದೆ ಪರದಾಟ- ರಸ್ತೆ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

Public TV
0 Min Read

ಬೆಳಗಾವಿ: ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ದಿಢೀರ್ ಅಂತ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂಭ್ರಾ ಗ್ರಾಮದಲ್ಲಿ ರಸ್ತೆ ತಡೆದು ವಿದ್ಯಾರ್ಥಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಪಂತಬಾಳೇಕುಂದ್ರಿ ಹಾಗೂ ಸುಳೇಬಾವಿ ಮಾರ್ಗದ ಬಸ್‍ಗಳು ಬೆಳಗ್ಗೆ ನಿಲುಗಡೆಯಾಗುತ್ತಿಲ್ಲ. ಸಮರ್ಪಕ ಬಸ್ ವ್ಯವಸ್ಥೆಯಿಲ್ಲದೇ ಕಳೆದ ಹಲವು ತಿಂಗಳಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇದರಿಂದ ಶಾಲಾ-ಕಾಲೇಜುಗಳಿಗೆ ತೆರಳಲು ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಒಂದು ಗಂಟೆಗಳ ಕಾಲ ರಸ್ತೆ ತಡೆಯಿಂದ ಬೆಳಗಾವಿ-ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು.

ನಂತರ ಮಾರಿಹಾಳ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು

Share This Article
Leave a Comment

Leave a Reply

Your email address will not be published. Required fields are marked *