ಪ್ರೌಢಶಾಲೆ ನಿರ್ಮಾಣಕ್ಕೆ ಆಗ್ರಹಿಸಿ ಡಿಡಿಪಿಐ ಕಚೇರಿ ಮುಂದೆ ವಿದ್ಯಾರ್ಥಿಗಳ ಧರಣಿ

Public TV
1 Min Read

ರಾಯಚೂರು: ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ತೆರೆಯಲು ಒತ್ತಾಯಿಸಿ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುಂದೆ ಹೋರಾಟ ನಡೆಸಿದ್ದಾರೆ.

ಗ್ರಾಮದಲ್ಲಿ 8ನೇ ತರಗತಿವರೆಗೆ ಮಾತ್ರ ಶಾಲೆ ಇದ್ದು, ಪ್ರೌಢಶಾಲೆಗಾಗಿ ದೂರದ ಊರುಗಳಿಗೆ ಹೋಗಬೇಕಾದ ಅನಿರ್ವಾಯತೆಯಿದೆ. ಹೀಗಾಗಿ ಶಾಲೆಯಿಲ್ಲದ ಕಾರಣ ಹೆಣ್ಣುಮಕ್ಕಳಿಗೆ ಬೇಗನೇ ಮದುವೆ ಮಾಡುವುದು, ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ಹೆಚ್ಚಾಗುತ್ತಿದೆ ಅಂತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮದಲ್ಲಿ ಎಂಟನೇ ತರಗತಿ ಮುಗಿಸಿರುವ ವಿದ್ಯಾರ್ಥಿಗಳೆಲ್ಲಾ ಒಟ್ಟಾಗಿ ಪ್ರೌಢಶಾಲೆ ತೆರೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಹೊತ್ತಿರುವ ತನ್ವೀರ್ ಸೇಠ್ ಸ್ವತಃ ಶಿಕ್ಷಣ ಸಚಿವರಾಗಿರುವುದರಿಂದ ಕೂಡಲೇ ಸಮಸ್ಯೆಗೆ ಸ್ಪಂದಿಸಬೇಕು ಅಂತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *