ಹುಡುಗಿಗೆ ಮೆಸೇಜ್ ಮಾಡಿದಕ್ಕೆ ವಿದ್ಯಾರ್ಥಿಯಿಂದ ಚಾಕು ಇರಿತ

Public TV
1 Min Read

ಬೆಂಗಳೂರು: ಯುವತಿಯ ವಿಚಾರಕ್ಕೆ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಯನ್ನು ಕೊಲೆ ಮಾಡಿದ ಘಟನೆ ಇಂದು ಬೆಳಗ್ಗೆ ಸುಮಾರು 9.00ಗಂಟೆಗೆ ಬೆಂಗಳೂರಿನ ಎಂಟನೇ ಮೈಲಿಯ ಸೌಂದರ್ಯ ಪಿಯು ಕಾಲೇಜಿನಲ್ಲಿ ನಡೆದಿದೆ.

ರಕ್ಷಿತ್ (18) ತನ್ನ ಸಹಪಾಠಿ ದಯಾಸಾಗರ್ (18)ನನ್ನು ಚಾಕುಯಿಂದ ಇರಿದು ಕೊಲೆ ಮಾಡಿದ್ದಾನೆ. ದಯಾಸಾಗರ್ ಹಾಗೂ ರಕ್ಷಿತ್ ಇಬ್ಬರು ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಸೌಂದರ್ಯ ಕಾಲೇಜಿನಲ್ಲಿ ಓದುತ್ತಿದ್ದರು. ದಯಾಸಾಗರ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡುತ್ತಿದ್ದನು. ಈ ಬಗ್ಗೆ ರಕ್ಷಿತ್ ಹಲವು ಬಾರಿ ಗುಂಪು ಕಟ್ಟಿಕೊಂಡು ದಯಾಸಾಗರ್ ಗೆ ವಾರ್ನ್ ಕೂಡ ಮಾಡಿದ್ದನು.

ಹುಡುಗಿ ವಿಚಾರಕ್ಕೆ ಇಬ್ಬರು ಕಾಲೇಜಿನಲ್ಲೇ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ರಕ್ಷಿತ್ ಬ್ಯಾಗಿನಲ್ಲಿದ್ದ ಚಾಕು ತೆಗೆದು ದಯಾಸಾಗರ್ ಇರಿದಿದ್ದಾನೆ. ದಯಾಸಾಗರ್ ನನ್ನು ಸಹಪಾಠಿಗಳು ಹಾಗೂ ಅಧ್ಯಾಪಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತೀವ್ರ ರಕ್ತಸ್ರಾವ ಉಂಟಾಗಿ ದಯಾಸಾಗರ್ ಮೃತಪಟ್ಟಿದ್ದಾನೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಕ್ಷಿತ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *