ಪ್ರಳಯ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ – ದೇಶದ ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Public TV
1 Min Read

ಭುವನೇಶ್ವರ: ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ತಯಾರಿಸಿದ ಘನ-ಇಂಧನ ಕ್ಷಿಪಣಿಯನ್ನು ‘ಪ್ರಳಯ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.

ಒಡಿಶಾ ಕರಾವಳಿಯ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಬುಧವಾರ ಬೆಳಗ್ಗೆ 10:30ರ ವೇಳೆಗೆ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಈ ಮೂಲಕ ಭಾರತೀಯ ರಕ್ಷಣಾ ಕ್ಷೇತ್ರ ಮತ್ತಷ್ಟು ಬಲಗೊಂಡಿದೆ. ಇದನ್ನೂ ಓದಿ: ರಷ್ಯಾದ ಮಹಿಳಾ ಗಗನಯಾತ್ರಿ ಸ್ಪೇಸ್ ಎಕ್ಸ್ ಮೂಲಕ ಬಾಹ್ಯಾಕಾಶಕ್ಕೆ

ಪ್ರಳಯ್ ಒಂದು ಅರೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಸಮುದ್ರ ಅಥವಾ ನೆಲದ ಮೂಲಕ ಉಡಾಯಿಸಬಹುದಾಗಿದೆ. ಇದು ನಿರ್ಧಿಷ್ಟ ದೂರ ಕ್ರಮಿಸಿದ ಬಳಿಕ ತನ್ನ ಮಾರ್ಗವನ್ನು ಬದಲಾಯಿಸಿ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯ ಹೊಂದಿದೆ.

ಪ್ರಳಯ್ 250 ರಿಂದ 500 ಕಿಮೀ ದೂರದಲ್ಲಿರುವ ಗುರಿಯನ್ನು ನಾಶ ಮಾಡುವ ಸಾಮರ್ಥ್ಯವನ್ನು ಹೊಂದಿದೆ. 500 ರಿಂದ 1,000 ಕೆಜಿ ತೂಕದ ಸಿಡಿತಲೆಗಳನ್ನು ಹೊತ್ತೊಯ್ಯುವ ಕ್ಷಿಪಣಿಯನ್ನು ಮೊಬೈಲ್ ಲಾಂಚರ್ ಮೂಲಕವೂ ಉಡಾವಣೆ ಮಾಡಬಹುದಾಗಿದೆ. ಈ ಕ್ಷಿಪಣಿಯನ್ನು ಅತ್ಯಾಧುನಿಕ ನ್ಯಾವಿಗೇಶನ್ ಸಿಸ್ಟಮ್ ಬಳಸಿ ಅಭಿವೃದ್ಧಿ ಪಡಿಸಲಾಗಿದೆ. ಇದನ್ನೂ ಓದಿ: ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿ ಪ್ರಯೋಗಾರ್ಥ ಪರೀಕ್ಷೆ ಸಕ್ಸಸ್

Share This Article
Leave a Comment

Leave a Reply

Your email address will not be published. Required fields are marked *