ರಾಜರಾಜೇಶ್ವರಿನಗರದಲ್ಲಿ ಸಚಿವ ಮುನಿರತ್ನ ಪರ ಸುದೀಪ್ ಅಬ್ಬರದ ಪ್ರಚಾರ

Public TV
1 Min Read

ಬೆಂಗಳೂರು: ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಗೆ (Assembly Election) ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದು, ತಯಾರಿಗಳು ಕೊನೆ ಹಂತವನ್ನು ತಲುಪಿದೆ. ಅಭ್ಯರ್ಥಿಗಳ ಪರವಾಗಿ ಸ್ಟಾರ್ ಪ್ರಚಾರಕರು ಪ್ರಚಾರ ಕಾರ್ಯವನ್ನು ಜೋರಾಗಿಯೇ ನಡೆಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ (BJP) ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯವನ್ನು ಮಾಡುವುದಾಗಿ ಹೇಳಿದ್ದ ಸುದೀಪ್ (Sudeep) ಭಾನುವಾರ ಸಚಿವ ಮುನಿರತ್ನ (Munirathna) ಪರವಾಗಿ ಪ್ರಚಾರ ನಡೆಸಿದ್ದಾರೆ.

ರಾಜರಾಜೇಶ್ವರಿನಗರದ (Rajarajeshwari Nagar) ಬಿಜೆಪಿ ಅಭ್ಯರ್ಥಿಯಾಗಿರುವ ಮುನಿರತ್ನ ಪರ ನಟ ಸುದೀಪ್ ಭಾನುವಾರ ನಗರದ ಮಾಳಗಾಳ ಗ್ರಾಮದಲ್ಲಿ ಮತ ಪ್ರಚಾರ ನಡೆಸಿದ್ದಾರೆ. ಜ್ಞಾನಭಾರತಿ ವಾರ್ಡ್, ರಾಜರಾಜೇಶ್ವರಿ ನಗರ ವಾರ್ಡ್ ಸೇರಿದಂತೆ ಅನೇಕ ಕಡೆ ಮತ ಪ್ರಚಾರ ಮಾಡಿದ್ದಾರೆ. ಸುದೀಪ್‌ರನ್ನು ಮುನಿರತ್ನ ತಮ್ಮ ಕ್ಷೇತ್ರಕ್ಕೆ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದ ಅಭಿವೃದ್ಧಿ ಮಾಡಿ ನಿಮ್ಮ ಪ್ರೀತಿನಾ ಬಡ್ಡಿ ಸಮೇತ ತೀರಿಸುತ್ತೇನೆ: ಮೋದಿ

ಕಳೆದ ತಿಂಗಳು ಸುದೀಪ್ ಬೊಮ್ಮಾಯಿ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವಂತೆ ಮತದಾರರಲ್ಲಿ ಕೇಳಿಕೊಂಡು ಪ್ರಚಾರ ಕಾರ್ಯಗಳನ್ನು ಪ್ರಾರಂಭಿಸಿದರು. ತಾವು ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದ ಸುದೀಪ್, ಸಿಎಂ ತಿಳಿಸಿದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯಗಳನ್ನು ನಡೆಸುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್ ಜೊತೆ ರಾಹುಲ್ ಗಾಂಧಿ ಬೈಕ್‍ ರೈಡ್‌

Share This Article
Leave a Comment

Leave a Reply

Your email address will not be published. Required fields are marked *