ಸುದೀಪ್ ಕೊಟ್ಟ ಗಿಫ್ಟ್ ನೋಡಿ ಹರೀಶ್ ಕಣ್ಣೀರು

Public TV
1 Min Read

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಮುಕ್ತಾಯವಾಗಿದ್ದು, ಈ ಬಾರಿ ಬಿಗ್‍ಬಾಸ್ ಮನೆಯಲ್ಲಿದ್ದ ಅನೇಕರಿಗೆ ಕಿಚ್ಚ ಸುದೀಪ್ ಸ್ಪೆಷಲ್ ಉಡುಗೊರೆಯನ್ನು ಕೊಟ್ಟಿದ್ದಾರೆ. ಇದೀಗ ಬಿಗ್‍ಬಾಸ್ ಮುಗಿಯುತ್ತಿದ್ದಂತೆ ಹರೀಶ್ ರಾಜ್‍ಗೆ ಸುದೀಪ್ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ.

ಸುದೀಪ್ ಅವರು ಹರೀಶ್ ರಾಜ್ಗೆ ತಮ್ಮ ದುಬಾರಿ ವಾಚನ್ನು ಉಡುಗೊಡೆಯಾಗಿ ಕೊಟ್ಟಿದ್ದಾರೆ. ಬಿಗ್‍ಬಾಸ್ ಮನೆಯಲ್ಲಿದ್ದಾಗ ಹರೀಶ್ ಫಿನಾಲೆ ವಾರದಲ್ಲಿ ಮಿಡ್‍ವೀಕ್ ಎಲಿಮಿನೇಟ್ ಆಗುವ ಮೂಲಕ ರಾತ್ರೋರಾತ್ರಿ ಮನೆಯಿಂದ ಹೊರ ಬಂದಿದ್ದರು. ಅಂದು ಮನೆಯಿಂದ ಹೊರ ಬಂದವರು ಬಿಗ್‍ಬಾಸ್ ಫಿನಾಲೆಯಲ್ಲಿ ಸುದೀಪ್ ಜೊತೆ ವೇದಿಕೆ ಹಂಚಿಕೊಡಿದ್ದರು.

ಬಿಗ್‍ಬಾಸ್ ಮನೆಯಲ್ಲಿದ್ದಾಗ ಹರೀಶ್ ಅವರು ಯುವಕರಿಗೆ ಪೈಪೋಟಿ ಕೊಟ್ಟು ಟಾಸ್ಕ್ ಗಳಲ್ಲಿ ಅದ್ಭುತವಾಗಿ ಆಟವಾಡಿದ್ದರು. ಅಲ್ಲದೇ ಮನೆಯಲ್ಲಿದ್ದಷ್ಟು ದಿನ ವೀಕ್ಷಕರಿಗೆ ತಮ್ಮ ನಟನೆ, ಮಿಮಿಕ್ರಿ ಮೂಲಕ ಮನರಂಜನೆ ನೀಡಿದ್ದರು. ಇದು ಸುದೀಪ್‍ಗೆ ತುಂಬಾ ಇಷ್ಟವಾಗಿತ್ತು. ಹೀಗಾಗಿ ಹರೀಶ್‍ಗೆ ತಾವು ಹಾಕಿಕೊಂಡಿದ್ದ ವಾಚನ್ನು ಉಡುಗೊರೆಯಾಗಿ ನೀಡಿದ್ದಾರೆ…

ಈ ಬಗ್ಗೆ ಮಾತನಾಡಿದ ಹರೀಶ್ ರಾಜ್, ಸುದೀಪ್ ಸರ್ ಹೇಳಿದ್ದಂತೆ ಬಿಗ್‍ಬಾಸ್ ಮುಗಿಯುತ್ತಿದ್ದಂತೆ ಎಲ್ಲಾ ಸ್ಪರ್ಧಿಗಳು ಪಾರ್ಟಿ ಮಾಡಿದ್ವಿ. ಈ ವೇಳೆ ಮಾತನಾಡಿದ ಸುದೀಪ್ ಸರ್, ಹರೀಶ್ ರಾಜ್ ಎಲ್ಲರನ್ನು ಮನರಂಜನೆ ನೀಡಿದ್ದಾರೆ. ಅವರಿಗೆ ನಾನು ಏನಾದರು ಕೊಡಬೇಕು ಎಂದು ಎಲ್ಲರ ಮುಂದೆ ಹೇಳಿದರು. ಅಲ್ಲದೇ ಮಾತು ಮುಗಿಯುವ ಮುನ್ನವೇ ತಮ್ಮ ಕೈಯಲ್ಲಿದ್ದ ದುಬಾರಿ ವಾಚನ್ನು ತೆಗೆದು ನನಗೆ ಹಾಕಿದರು ಎಂದರು.

ಸುದೀಪ್ ಸರ್ ನನಗೆ ವಾಚ್ ಹಾಕಿದ ತಕ್ಷಣ ಎಮೋಷನಲ್ ಆದೆ. ಆ ಸಂದರ್ಭದಲ್ಲಿ ನಾನು ಏನು ಮಾತನಾಡಲು ಸಾಧ್ಯವಾಗಿಲ್ಲ. ಆಗ ಸುದೀಪ್ ಅವರನ್ನು ತಬ್ಬಿಕೊಂಡು ಕಣ್ಣೀರು ಹಾಕಿದೆ ಎಂದು ಹರೀಶ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ರಲ್ಲಿ ಶೈನ್ ಶೆಟ್ಟಿ ವಿನ್ನರ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದು, ಕುರಿ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *