ನಿರ್ಮಾಪಕ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್

Public TV
1 Min Read

ತ್ತೀಚೆಗೆ ನಟ ಸುದೀಪ್ (Sudeep) ವಿರುದ್ದ ನಿರ್ಮಾಪಕ ಎಂ.ಎನ್ ಕುಮಾರ್ ಸುದ್ದಿಗೋಷ್ಠಿ ಮೂಲಕ ಸಾಕಷ್ಟು ಆರೋಪ ಮಾಡಿದ್ದರು. ಸುದೀಪ್ ಹಣ ಪಡದು, ಡೇಟ್ಸ್ ನೀಡಿಲ್ಲ ಅಂತೆಲ್ಲಾ ಆರೋಪಿಸಿದ್ದರು. ಕುಮಾರ್ ಆರೋಪದ ನಂತರ ಒಗಟಿನ ರೀತಿಯಲ್ಲಿ ಟ್ವೀಟ್ ಒಂದನ್ನು ಮಾಡಿ ಸುಮ್ಮನಾಗಿದ್ದ ಸುದೀಪ್, ಇದೀಗ ಮೌನ ಮುರಿದು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ವಕೀಲರ ಮೂಲಕ ನಿರ್ಮಾಪಕ ಕುಮಾರ್ (M.N. Kumar) ಅವರಿಗೆ ನೋಟಿಸ್ ಕಳುಹಿಸಿರುವ ಸುದೀಪ್, ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತು ಪಡಿಸಿ, ಇಲ್ಲವಾದಲ್ಲಿ 10 ಕೋಟಿ ಮಾನನಷ್ಟದ (Defamation Case) ದಂಡ ಕಟ್ಟಿಕೊಡಿ’ ಎಂದಿದ್ದಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

ಸುಳ್ಳು ಆರೋಪ -ಸಾಕ್ಷಿ ರಹಿತ ವಿವಾದ ಮತ್ತು ಕುಮಾರ್ ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ನಿರ್ಮಾಪಕ ಎಂ.ಎನ್ ಸುರೇಶ್ (MN Suresh) ಮೇಲೆಯೂ ಕಿಚ್ಚನಿಂದ ತೀವ್ರ ಕ್ರಿಮಿನಲ್ ಮೊಕದ್ದಮೆ ಹೂಡಿದ್ದು ಈ ಮೂಲಕ ಇಬ್ಬರು ನಿರ್ಮಾಪಕರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

ಸುದೀಪ್ ಮತ್ತು ಕುಮಾರ್ ಒಟ್ಟಾಗಿ ನಾಲ್ಕು ಸಿನಿಮಾಗಳನ್ನು ಮಾಡಿದ್ದಾರೆ. ಮತ್ತೊಂದು ಸಿನಿಮಾ ಮಾಡಲು ಇಬ್ಬರೂ ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಸಂಬಂಧವಾಗಿ ಸುದೀಪ್ ಅವರಿಗೆ ಕುಮಾರ್ ಹಣ ನೀಡಿದ್ದರು ಎಂದು ಸ್ವತಃ ಕುಮಾರ್ ಅವರೇ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್