ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಸುಟ್ಟು ಭಸ್ಮ

Public TV
1 Min Read

ಕಲಬುರಗಿ: ವಿದ್ಯುತ ಶಾರ್ಟ್ ಸರ್ಕ್ಯೂಟ್‌ನಿಂದ ಗದ್ದೆಯಲ್ಲಿ ಬೆಳೆದ ಕಬ್ಬು ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಅವರಳ್ಳಿ ಗ್ರಾಮದಲ್ಲಿ ನಡೆದಿದೆ.

ಯಲ್ಲಾಲಿಂಗ ಪಾಟೀಲ್ ಮತ್ತು ಮಲ್ಲಮ್ಮಾ ಪಾಟೀಲ್‌ಗೆ ಸೇರಿದ ಕಬ್ಬಿನ ಗದ್ದೆ ಇದಾಗಿದೆ. ೭ ಎಕರೆ ೧೯ ಗುಂಟೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಲಕ್ಷಾಂತರ ರೂ ಮೌಲ್ಯದ ಸುಮಾರು ೫೦೦ ಟನ್ ಕಬ್ಬು ಸುಟ್ಟು ಕರಕಲಾಗಿದೆ. ಇದನ್ನೂ ಓದಿ : ಮಹಿಳಾ ದಿನಾಚರಣೆಗಾಗಿ ವಿಶೇಷ ಪೋಸ್ಟರ್ ರಿಲೀಸ್ ಮಾಡಿದ ಕೆಜಿಎಫ್ 2 ತಂಡ

ವಿದ್ಯುತ್ ತಂತಿಗಳು ಜೊತು ಬಿದ್ದಿರುವ ಪರಿಣಾಮ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದೆ. ಘಟನೆಯು ದೇವಲ್ ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ : ಆ ಏರಿಯಾದಲ್ಲಿ ಪುನೀತ್ ನಟನೆಯ ಜೇಮ್ಸ್ ರಿಲೀಸ್ ಗೆ 12 ಕೋಟಿ ಕೇಳಿದ್ರಾ ವಿತರಕರು?

Share This Article
Leave a Comment

Leave a Reply

Your email address will not be published. Required fields are marked *