ಅಂಬಿ ಅಭಿಮಾನಿಯ ಎವರ್ ಗ್ರೀನ್ ಪ್ರೀತಿಗೆ ಮನಸೋತ ಸುಮಲತಾ

Public TV
1 Min Read

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅವರು ದೈಹಿಕವಾಗಿ ದೂರವಾಗಿದ್ದರೂ ತಮ್ಮ ಅಭಿಮಾನಿಗಳ ಮನಸ್ಸಿನಲ್ಲಿ ಈಗಲೂ ಜೀವಂತವಾಗಿದ್ದಾರೆ. ಅಂಬರೀಶ್ ಅವರ ಅಭಿಮಾನಿಯೊಬ್ಬರು ತಮ್ಮ ನೆಚ್ಚಿನ ನಟನ ಮೇಲೆ ಪ್ರೀತಿಯನ್ನು ವಿಭಿನ್ನವಾಗಿ ತೋರಿಸಿದ್ದಾರೆ. ಅಭಿಮಾನಿಯ ಈ ಪ್ರೀತಿಗೆ ಸುಮಲತಾ ಅವರು ಮನಸೋತಿದ್ದಾರೆ.

ಸುಮಲತಾ ಅವರು ತಮ್ಮ ಟ್ವಿಟ್ಟರಿನಲ್ಲಿ ರೈತರೊಬ್ಬರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಫೋಟೋದಲ್ಲಿ ರೈತರೊಬ್ಬರು ತಮ್ಮ ಹೊಲದಲ್ಲಿನ ಭತ್ತದ ನಾಟಿ ಮೇಲೆ ಹೃದಯದ ಆಕಾರ ಮಾಡಿ ಮತ್ತೆ ಹುಟ್ಟಿ ಬಾ ಅಂಬರೀಷ್ ಅಣ್ಣ ಎಂದು ಬರೆದಿದ್ದಾರೆ.

ಸುಮಲತಾ ಅಂಬರೀಶ್ ಅವರು ಈ ಫೋಟೋವನ್ನು ತಮ್ಮ ಟ್ವಿಟ್ಟರಿನಲ್ಲಿ ಹಂಚಿಕೊಂಡು ಅದಕ್ಕೆ, “ಇದು ಎವರ್ ಗ್ರೀನ್ ಪ್ರೀತಿ. ನೆಚ್ಚಿನ ನಟನ ಮೇಲಿರುವ ಪ್ರೀತಿ ತುಂಬಾ ವಿಭಿನ್ನವಾಗಿ ತೋರಿಸಿದ್ದೇನೆ. ಈ ಫೋಟೋ ನೋಡಿ ನಾನು ಮನಸೋತಿದ್ದೇನೆ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಸುಮಲತಾ ಅವರ ಈ ಟ್ವೀಟ್ ಅನ್ನು ಕಿಚ್ಚ ಸುದೀಪ್ ಅವರು ರೀ-ಟ್ವೀಟ್ ಮಾಡಿದ್ದಾರೆ. ಸುದೀಪ್ ಅವರು ತಮ್ಮ ಟ್ವಿಟ್ಟರಿನಲ್ಲಿ, ಇನ್ನೊಬ್ಬರ ಹೃದಯದಲ್ಲಿ ಜೀವಂತವಾಗಿರುವವರು ಎಂದಿಗೂ ಸಾವನ್ನಪ್ಪುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಅವರು ನ.24ರಂದು ರಾತ್ರಿ ನಿಧನರಾಗಿದ್ದರು. ಅಂದೇ ಮಂಡ್ಯದ ಕನಗನಮರಡಿಯಲ್ಲಿ ಬಸ್ ದುರಂತ ನಡೆದಿದ್ದು, ಘಟನೆ ನೋಡಿ ಬೇಸರಗೊಂಡಿದ್ದ ಅಂಬರೀಶ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *