ರಾಯನ್ ರಾಜ್ ಸರ್ಜಾಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ: ಸುಮಲತಾ

By
2 Min Read

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ದಂಪತಿಯ ಪ್ರೀತಿಯ ಪುತ್ರನ ನಾಮಕರಣದಲ್ಲಿ ಭಾಗಿಯಾಗಿದ್ದ ಸಂತೋಷದ ಕ್ಷಣಗಳನ್ನು ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

meghana raj

ಪುಟ್ಟ ರಾಯನ್ ರಾಜ್ ಸರ್ಜಾ ಅವರಿಗೆ ದೇವರು ಪ್ರಪಂಚದ ಪ್ರತಿಯೊಂದು ಸಂತೋಷವನ್ನು ನೀಡಲಿ ಎಂದು ಬರೆದುಕೊಂಡು ಅಭಿಷೇಕ್ ಅಂಬರೀಶ್, ಸುಮಲತಾ, ಸುಂದರ್ ರಾಜ್, ಧ್ರವಾ ಸರ್ಜಾ, ಮೇಘನಾ ರಾಜ್ ಮತ್ತು ಅವರು ಮಗ ಒಂದೇ ಫ್ರೇಮ್‍ನಲ್ಲಿ ಇರುವ ಚಂದೆದ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದಾರೆ.

ಸಿನಿಮಾ ರಂಗದಿಂದ ದೂರ ಉಳಿದಿರುವ ಸುಮಲತಾ ಅಂಬರೀಶ್ ಅವರು ಸದ್ಯ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿಯೂ ಸಖತ್ ಆ್ಯಕ್ಟೀವ್ ಆಗಿದ್ದು, ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜೊತೆ ನಿತ್ಯ ಸಂಪರ್ಕದಲ್ಲಿರುತ್ತಾರೆ. ಇದನ್ನೂ ಓದಿ: ಮಗನಿಗೆ ರಾಯನ್ ಹೆಸರಿಟ್ಟಿದ್ದಕ್ಕೆ ಮೇಘನಾ ಸ್ಪಷ್ಟನೆ

 

View this post on Instagram

 

A post shared by Meghana Raj Sarja (@megsraj)

ಹಿಂದೂ ಸಂಪ್ರದಾಯದ ಜೊತೆಗೆ ಕ್ರೈಸ್ತ ಸಂಪ್ರದಾಯದ ಪ್ರಕಾರ ನಾಮಕರಣ ಮಾಡಲಾಗಿತ್ತು. ಈ ಕುರಿತಂತೆ ಕೆಲವು ಮಂದಿ ರಾಯನ್ ರಾಜ್ ಸರ್ಜಾ ಎಂಬ ಹೆಸರಿನ ಬಗ್ಗೆ ಸೋಶಿಯಲ್ ಮೀಡಿಯಾ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು. ಸದ್ಯ ಈ ಬಗ್ಗೆ ಮೇಘನಾ ರಾಜ್ ಸ್ಪಷ್ಟನೆ ನೀಡಿದ್ದಾರೆ. ಒಬ್ಬ ತಾಯಿಯಾಗಿ ನಾನು ನನ್ನ ಮಗನಿಗೆ ಉತ್ತಮವಾದುದನ್ನು ನೀಡುವುದು ಬಹಳ ಮುಖ್ಯ. ಅವನ ತಂದೆ, ತಾಯಿ ಖುಷಿಪಟ್ಟಂತೆ ಎರಡು ಧರ್ಮದಲ್ಲಿರುವ ಒಳ್ಳೆಯ ಅಂಶ ಅವನಿಗೆ ಯಾಕೆ ಸಿಗಬಾರದು? ಜನರು ತಮ್ಮ ಜಾತಿ, ಧರ್ಮವನ್ನು ಲೆಕ್ಕಿಸದೇ ಅವನಿಗಾಗಿ ಹಾಗೂ ನಮ್ಮ ಕುಟುಂಬಕ್ಕಾಗಿ ಪ್ರಾರ್ಥಿಸಿದ್ದಾರೆ. ಎಲ್ಲ ದೇವರಿಂದಲೂ ನಾವು ಆಶೀರ್ವಾದವನ್ನು ಕೋರುತ್ತೇವೆ. ಎರಡು ಸಂಪ್ರದಾಯದ ಪ್ರಕಾರ ಇದನ್ನು ಮಾಡುವುದು ನನಗೆ ಬಹಳ ಮುಖ್ಯವಾಗಿತ್ತು. ಏಕೆಂದರೆ ಇದಕ್ಕೆ ಕಾರಣ ಅವನ ತಂದೆ, ನಮ್ಮ ರಾಜ ಚಿರು ಎಲ್ಲದಕ್ಕಿಂತ ಹೆಚ್ಚಾಗಿ ಮಾನವೀಯತೆ ಮುಖ್ಯ ಎಂದು ನಂಬಿದ್ದರು. ಹೀಗಾಗಿ ಎರಡು ಸಂಪ್ರದಾಯದಲ್ಲಿ ಉತ್ತಮವಾಗಿರುವುದನ್ನು ಆಚರಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *