ವೇದಿಕೆಗೆ ಸುಮಲತಾ ಬಂದಿದ್ದಕ್ಕೆ ಕಿತ್ತಾಟ – ಕೈಕೈ ಮಿಲಾಯಿಸಿದ ಗ್ರಾಮಸ್ಥರು

Public TV
1 Min Read

ಮಂಡ್ಯ: ದೇವಸ್ಥಾನ (Temple) ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ (Sumalatha Ambareesh) ವೇದಿಕೆ ಏರುವ ವಿಚಾರಕ್ಕೆ ಗ್ರಾಮಸ್ಥರಲ್ಲಿ ವಾಗ್ವಾದ ನಡೆದಿದ್ದು, ಬಳಿಕ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ಬಿ.ಗೌಡಗೆರೆ ಗ್ರಾಮದಲ್ಲಿ ನಡೆದಿದೆ.

ಮಂಡ್ಯ (Mandya) ತಾಲೂಕಿನ ಬಿ.ಗೌಡಗೆರೆ ಗ್ರಾಮದಲ್ಲಿ ಮಹದೇಶ್ವರ ದೇವಾಲಯ ಉದ್ಘಾಟನೆ ವೇಳೆ ಸುಮಲತಾ ಬೆಂಬಲಿಗರು ಹಾಗೂ ಮತ್ತೊಂದು ಬಣಗಳ ನಡುವೆ ವಾಗ್ವಾದ ನಡೆದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಇದನ್ನೂ ಓದಿ: ಮಾಧುಸ್ವಾಮಿ ಮೊದಲು ಮಾತಾಡಲಿ- ಸಚಿವರ ಹೇಳಿಕೆಗೆ ಸಿಎಂ ವ್ಯಂಗ್ಯ

ದೇವಾಲಯ ಉದ್ಘಾಟನೆ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಿಸಲಾಗಿತ್ತು. ಈ ವೇದಿಕೆಗೆ ರಾಜಕೀಯ ಮುಖಂಡರನ್ನು ಹತ್ತಿಸಬಾರದು ಎಂದು ಮೊದಲೇ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈ ನಡುವೆಯೂ ಸಂಸದೆ ಸುಮಲತಾರನ್ನ ವೇದಿಕೆಗೆ ಕರತೆತಂದಿದ್ದರಿಂದ ಗ್ರಾಮಸ್ಥರಲ್ಲಿ ಅಸಮಾಧಾನ ವ್ಯಕ್ತವಾಗಿತ್ತು. ಇದನ್ನೂ ಓದಿ: ಗಲ್ಲಾಪೆಟ್ಟಿಗೆಯಲ್ಲಿ 16 ಸಾವಿರ ಕೋಟಿ ಬಾಚಿದ `ಅವತಾರ್ 2′ ಸಿನಿಮಾ

ಯಾಕೆ ಸುಮಲತಾರನ್ನ ವೇದಿಕೆ ಹತ್ತಿಸುತ್ತೀರಾ? ಎಂದು ಕೆಲವರು ಪ್ರಶ್ನಿಸಿ ವಾಗ್ವಾದಕ್ಕಿಳಿದರು. ಪರಿಸ್ಥಿತಿ ಮಿತಿ ಮಿರಿ ಎರಡು ಬಣದವರು ಕಿತ್ತಾಟಕ್ಕಿಳಿದರು. ಒಂದು ಗುಂಪಿನ ವಿರೋಧದ ನಡುವೆಯೂ ಮತ್ತೊಂದು ಗುಂಪು ಸುಮಲತಾರನ್ನ ವೇದಿಕೆಗೆ ಕರೆತಂದಿತು. ಬಳಿಕ ವೇದಿಕೆಯಲ್ಲಿ ಮಾತನಾಡಿ ಸುಮಲತಾ ಕಾರ್ಯಕ್ರಮದಿಂದ ನಿರ್ಗಮಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *