ಹನಿಟ್ರ್ಯಾಪ್‌ ಪ್ರಕರಣ ತನಿಖೆಗೆ ಕೋರಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
1 Min Read

– ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? – ಅರ್ಜಿದಾರರಿಗೆ ತೀವ್ರ ತರಾಟೆ

ನವದೆಹಲಿ/ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ (Honeytrap Case) ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸುಪ್ರೀಂ ಕೋರ್ಟ್‌ (Supreme Court) ಇಂದು ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತು. ಅಲ್ಲದೇ ವಿಚಾರಣೆ ವೇಳೆ ಅರ್ಜಿದಾರ ಬಿನಯ್ ಕುಮಾರ್ ಸಿಂಗ್ ತರಾಟೆಗೆ ತೆಗೆದುಕೊಂಡಿತು. ಇದನ್ನೂ ಓದಿ: ತಾಯಿ ಚಾಮುಂಡೇಶ್ವರಿಗೆ ಡೈಲಾಗ್‌ನಲ್ಲಿ ಅಪಮಾನ ಆರೋಪ- ರಕ್ಷಕ್ ವಿರುದ್ಧ ಸಿಡಿದೆದ್ದ ಹಿಂದೂ ಸಂಘಟನೆ

ನೀವು ಜಾರ್ಖಂಡ್ ಮೂಲದವರು, ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? ಪೊಲಿಟಿಕಲ್ ನಾನ್‌ಸೆನ್ಸ್‌ಗಳನ್ನು ವಿಚಾರಣೆ ನಡೆಸಲು ನಾವು ಇಲ್ಲಿ ಕೂತಿಲ್ಲ. ನ್ಯಾಯಾಧೀಶರು ಯಾಕೆ ಹನಿಟ್ರ‍್ಯಾಪ್‌ಗೆ ಒಳಗಾಗುತ್ತಾರೆ? ಅದನ್ನು ನ್ಯಾಯಾಧೀಶರು ನೋಡಿಕೊಳ್ತಾರೆ. ಇಂತಹ ಅರ್ಜಿ ವಿಚಾರಣೆ ನಡೆಸಿಕೊಂಡು ಕೂರಲು ನಮಗೆ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ಗೆ ಮಾಡಲು ಸಾಕಷ್ಟು ಕೆಲಸ ಇದೆ ಎಂದು ಬಿನಯ್ ಕುಮಾರ್‌ರನ್ನ ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: Exclusive | ರನ್ಯಾ ಗೋಲ್ಡ್ ಸ್ಮಗ್ಲಿಂಗ್‌ ಕೇಸ್‌ – ಮೊದಲು ಚಿನ್ನ ಸಾಗಿಸಿದ್ದು ದಕ್ಷಿಣಾ ಆಫ್ರಿಕಾದಿಂದ ದುಬೈಗೆ!

ಅರ್ಜಿದಾರರ ಮನವಿ ಏನು?
ಕರ್ನಾಟಕದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ‍್ಯಾಪ್ ಪ್ರಕರಣ ನಡೆದಿದೆ. ಈ ಬಗ್ಗೆ ಸಚಿವರೇ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹೀಗಾಗೀ ಈ ಬಗ್ಗೆ ಸಿಬಿಐ ಅಥಾವ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಸುಪ್ರೀಂಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಬಿಜೆಪಿಯಲ್ಲೇ ಹನಿಟ್ರ್ಯಾಪ್‌ಗಳು ನಡೆದಿವೆ – ಯತೀಂದ್ರ ಸಿದ್ದರಾಮಯ್ಯ ಬಾಂಬ್‌

Share This Article