ಸುರಪುರ ಉಪಚುನಾವಣೆ; ಬಿಜೆಪಿಯಿಂದ ಮಾಜಿ ಶಾಸಕ ರಾಜುಗೌಡ ಕಣಕ್ಕೆ

Public TV
1 Min Read

ಯಾದಗಿರಿ: ಜಿಲ್ಲೆಯ ಸುರಪುರ (Surapura) ವಿಧಾನಸಭೆಗೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ (BJP) ಇಂದು ತನ್ನ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದೆ. ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹನಾಯಕ ರಾಜುಗೌಡ (Raju Gowda) ಅವರಿಗೆ ಟಿಕೆಟ್ ನೀಡಿದೆ.

ನಿರೀಕ್ಷೆಯಂತೆ ರಾಜುಗೌಡಗೆ ಬಿಜೆಪಿ ಪಕ್ಷ ಸುರಪುರ ಉಪಚುನಾವಣೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ನ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನದಿಂದ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆ ಸುರಪುರಕ್ಕೆ ಉಪಚುನಾವಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮೋದಿ.. ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್‌ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿ

ಫೆಬ್ರವರಿ 25ರಂದು ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದು, ಕಾಂಗ್ರೆಸ್‌ನಿಂದ ರಾಜಾ ವೆಂಕಟಪ್ಪ ನಾಯಕ ಪುತ್ರ ರಾಜಾ ವೇಣುಗೋಪಾಲ ನಾಯಕ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿದಿದ್ದಾರೆ. ಇತ್ತ ಬಿಜೆಪಿಯಿಂದ ಮಾಜಿ ಶಾಸಕ ರಾಜುಗೌಡ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮೇ 7ರಂದು ಮತದಾನ ನಡೆಯಲಿದೆ. ಇದನ್ನೂ ಓದಿ: ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ – ಅಧಿಕೃತ ಘೋಷಣೆ ಮಾತ್ರ ಬಾಕಿ

Share This Article