ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್

Public TV
2 Min Read

– ಸುಳ್ಳು ಸುದ್ದಿ ಹರಡಿಸದಂತೆ ಕಮಿಷನರ್ ಮನವಿ

ಮಂಗಳೂರು: ಸುರತ್ಕಲ್‍ನಲ್ಲಿ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಹತ್ಯೆಯ ವೇಳೆ ಇದ್ದ ಕಾರ್ ಮಾಲೀಕ ಅಜಿತ್ ಡಿಸೋಜನನ್ನು ಬಂಧಿಸಿದ್ದೇವೆ. ಅಜಿತ್‍ಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನೊಂದಿಗೆ ಸಂಪರ್ಕ ಇದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.

ಮಂಗಳೂರಿನಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿದೆ. 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸುತ್ತಿಲ್ಲ. ಆದರೆ ಕಾರಿನ ಇತರ ಗುರುತುಗಳನ್ನು ಹಿಡಿದು ವಿಚಾರಣೆ ನಡೆಸಿ ಕಾರಿನ ಮಾಲೀಕ ಅಜಿತ್‍ನನ್ನು ಬಂಧಿಸಿದ್ದೇವೆ. ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಹಲವು ಮಾಹಿತಿಗಳು ಸಿಕ್ಕಿದೆ ಎಂದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ, 5 ಲಕ್ಷ ಪರಿಹಾರ

ಇಯಾನ್ ಕಾರ್ ಮಾಲೀಕನನ್ನು ಕೋರ್ಟ್‍ಗೆ ಹಾಜರುಪಡಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆತನಿಂದ ಯಾರು ಕಾರ್ ಬಾಡಿಗೆ ಪಡೆದಿದ್ದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಆದರೆ ಕೊಲೆಗೆ ಬಳಸಿದ ಕಾರು ಸಿಕ್ಕಿಲ್ಲ. ಅದು ಆರೋಪಿಗಳ ಬಳಿಯೇ ಇರಬಹುದು. ಆರೋಪಿಗಳು ಅಜಿತ್‍ನಿಂದ ಕಾರ್ ಬಾಡಿಗೆಗೆ ಪಡೆದಿದ್ದರು. ಫಾಜಿಲ್ ತಂದೆ ಉನ್ನತಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿ ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಲಾಲ್, ಜಟ್ಕಾ ಜಟಾಪಟಿಯೇ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಕಾರಣವಾಯ್ತಾ..?

ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಬಗ್ಗೆ ಹರಡುತ್ತಿರುವ ವದಂತಿಗೆ ಕಿವಿ ಕೊಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಪೋಸ್ಟ್‌ಗಳನ್ನು ಹಾಕಿರುವವರ ವಿರುದ್ಧ 5 ಕೇಸ್ ದಾಖಲಾಗಿದೆ. 8 ಜನರ ತಂಡದಿಂದ ಸಾಮಾಜಿಕ ಜಾಲತಾಣಗಳನ್ನು ವಾಚ್ ಮಾಡಲಾಗುತ್ತಿದೆ. ಪೋಸ್ಟ್‌ ಹಾಕುವವರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಕೋಮುಗಳ ನಡುವೆ ಘರ್ಷಣೆ ಉಂಟು ಮಾಡುವಂತಹ ಪೋಸ್ಟ್‌ಗಳನ್ನು ಹಾಕುತ್ತಿದ್ದೀರಿ. ಈ ತರ ಪೋಸ್ಟ್‌ಗಳನ್ನು ಹಾಕವವರ ಮೇಲೆ ಕೇಸ್ ದಾಖಲಾಗುತ್ತದೆ. ಇದರಿಂದ ವರ್ಷಾನುಗಟ್ಟಲೆ ಕೋರ್ಟ್‌ಗೆ ಅಲೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *