14ನೇ ವಿಕೆಟ್ ಪತನ – ರೋಷನ್ ಬೇಗ್ ರಾಜೀನಾಮೆ

Public TV
2 Min Read

ಬೆಂಗಳೂರು: ಶಿವಾಜಿನಗರದ ಶಾಸಕ ರೋಷನ್ ಬೇಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ದೋಸ್ತಿ ಸರ್ಕಾರ 14ನೇ ವಿಕೆಟ್ ಪತನಗೊಂಡಿದೆ.

ಸ್ಪೀಕರ್ ರಮೇಶ್ ಕುಮಾರ್ ಕಚೇರಿಗೆ ತೆರಳಿದ ರೋಷನ್ ಬೇಗ್ ಅವರು ರಾಜೀನಾಮೆಯನ್ನು ಸಲ್ಲಿಸಿದರು. ರೋಷನ್ ಬೇಗ್ ರಾಜೀನಾಮೆ ಸಲ್ಲಿಸುವ ಸಮಯದಲ್ಲಿ ಸ್ಪೀಕರ್ ಕೊಠಡಿಯ ಒಳಗೆಡ ಕೃಷ್ಣಬೈರೇಗೌಡ ಮತ್ತು ಕೆಜೆ ಜಾರ್ಜ್ ಇದ್ದರು.

ಲೋಕಸಭಾ ಚುನಾವಣೆಯ ನಂತರ ಬಹಿರಂಗವಾಗಿಯೇ ಸಿದ್ದರಾಮಯ್ಯ ವಿರುದ್ಧ ಅಸಮಾಧಾನವನ್ನು ಹೊರ ಹಾಕಿದ್ದಕ್ಕೆ ರೋಷನ್ ಬೇಗ್ ಅವರನ್ನು ಕಾಂಗ್ರೆಸ್ಸಿನಿಂದ ಉಚ್ಚಾಟಿಸಲಾಗಿತ್ತು.

ತಮ್ಮ ರಾಜೀನಾಮೆ ನಿರ್ಧಾರದ ಕುರಿತು ಭಾನುವಾರ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಶಾಸಕ ರೋಷನ್ ಬೇಗ್, ಕಾಂಗ್ರೆಸ್ ನನ್ನನ್ನು ಈಗಾಗಲೇ ಅಮಾನುತು ಮಾಡಿದೆ. ಅಂದು ನಾನು ಆಡಿದ್ದ ಮಾತುಗಳೇ ದೊಡ್ಡ ಅಪರಾಧವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದಿಂದ 14 ಸಾವಿರಕ್ಕೂ ಹೆಚ್ಚು ಮತಗಳ ಲೀಡ್ ಬಂದಿದೆ. ಬೇರೆ ಯಾವ ಕ್ಷೇತ್ರದ ಅಭ್ಯರ್ಥಿಯೂ ಈ ಕೆಲಸವನ್ನು ಮಾಡಲಿಲ್ಲ. ಕೋಲಾರಲ್ಲಿ ದಲಿತ ನಾಯಕನನ್ನು ಸೋಲಿಸುತ್ತೇವೆ ಎಂದು ನಮ್ಮ ಪಕ್ಷದ ಶಾಸಕರೇ ಹೇಳಿದ್ದರು. ಇತ್ತ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಪರ ಕಾಂಗ್ರೆಸ್ ನಾಯಕರು ಪ್ರಚಾರ ನಡೆಸಿದರು. ಅಂತವರ ವಿರುದ್ಧ ಪಕ್ಷ ಯಾವುದೇ ಕ್ರಮಕ್ಕೆ ಮುಂದಾಗಲಿಲ್ಲ. ಬಡಪಾಯಿಯಾದ ನನ್ನ ಮೇಲೆ ಮಾತ್ರ ಕ್ರಮ ಕೈಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ರಾಜೀನಾಮೆ ನೀಡಲು ಮುಂದಾಗಿರುವ 7 ರಿಂದ 8 ಶಾಸಕರಲ್ಲಿ ನಾನು ಇರಬಹುದು. ಒಂದು ವೇಳೆ ನಾನು ರಾಜೀನಾಮೆ ನೀಡಿದ್ರೆ ಯಾವುದೇ ತಪ್ಪಿಲ್ಲ. ಇಂದು ಕಾಂಗ್ರೆಸ್ ಅವರಿಗೆ ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ನೆನಪಿಗೆ ಬಂದಿದ್ದಾರೆ ವ್ಯಂಗ್ಯವಾಡಿದ್ದರು.

ರಾಜಕೀಯ ಸಮನ್ವಯತೆ ಪಕ್ಷಗಳಲ್ಲಿ ಚೆನ್ನಾಗಿದ್ದಿದ್ದರೆ ಇಂದಿನ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿದ್ದ ಅವರು, ಈ ವೇಳೆ ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡಲು ಇಚ್ಛಿಸಲ್ಲ. ರಾಮಲಿಂಗಾ ರೆಡ್ಡಿ ಮತ್ತು ನಾವು ವಿದ್ಯಾರ್ಥಿ ಚಳುವಳಿಯ ಸಮಯದಿಂದ ರಾಜಕೀಯದಲ್ಲಿದ್ದವರು. ಲೋಕಸಭಾ ಚುನಾವಣೆಯಲ್ಲಿ ಯಾವ ನಾಯಕರು ರಾಮಲಿಂಗಾ ರೆಡ್ಡಿ ಅವರನ್ನು ಸಂಪರ್ಕಿಸಿ ಸಲಹೆ ಪಡೆಯಲಿಲ್ಲ. ಇದೀಗ ಎಲ್ಲರಿಗೂ ನಾವು ಬೇಕಾಗಿದ್ದೇವೆ. ನನಗೆ ಮಂತ್ರಿ ಆಗಲು ಇಷ್ಟವಿಲ್ಲ. ಯಾವ ಮಂತ್ರಿ ಪದವಿಯೂ ನನಗೆ ಬೇಡ ಎಂದರು.

Share This Article
Leave a Comment

Leave a Reply

Your email address will not be published. Required fields are marked *