ಮಂಡ್ಯ: ನವವಿವಾಹಿತೆಯ ಅನುಮಾನಾಸ್ಪದ ಸಾವು

Public TV
1 Min Read

ಮಂಡ್ಯ: ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕಬ್ಬಾರೆ ಗ್ರಾಮದಲ್ಲಿ ನಡೆದಿದೆ.

20 ವರ್ಷದ ಶೋಭಾ ಮೃತ ದುರ್ದೈವಿ. ಕೂಳಗೆರೆ ಗ್ರಾಮದ ಶೋಭಾ ಅವರನ್ನು ಆರು ತಿಂಗಳ ಹಿಂದೆ ಕಬ್ಬಾರೆ ಗ್ರಾಮದ ಸಿದ್ದರಾಜು ಜೊತೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ನಂತರ ಹಣ ಮತ್ತು ಜಮೀನಿಗಾಗಿ ಶೋಭಾಗೆ ನಿತ್ಯ ಕಿರುಕುಳ ಕೊಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಇದೀಗ ಶೋಭ ಮೃತದೇಹ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಶೋಭಾ ದೇಹದ ಹಲವೆಡೆ ರಕ್ತ ಕಂಡು ಬಂದಿದ್ದು, ಗಂಡನ ಮನೆಯವರೇ ಹೊಡೆದು ಕೊಲೆ ಮಾಡಿ ನಂತರ ನೇಣು ಹಾಕಿದ್ದಾರೆ ಎಂದು ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ. ಶೋಭ ಸಾವಿನ ನಂತರ ಗಂಡನ ಮನೆಯವರು ನಾಪತ್ತೆಯಾಗಿದ್ದಾರೆ. ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *