ಹಳಿ ಮಧ್ಯೆ ಅಗ್ನಿಶಾಮಕ ಸಿಲಿಂಡರ್‌ ಪತ್ತೆ – ರೈಲು ದುಷ್ಕೃತ್ಯಕ್ಕೆ ಸಂಚು; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ

Public TV
1 Min Read

ಲಕ್ನೋ: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ ಹಳಿ ಮೇಲೆ ವಸ್ತುಗಳನ್ನು ಇರಿಸಿ ರೈಲು ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಕಾನ್ಪುರದಲ್ಲಿ (Kanpur) ರೈಲ್ವೆ ಹಳಿಯಲ್ಲಿ (Train Driver Brakes) ಅನುಮಾನಾಸ್ಪದ ವಸ್ತು ಪತ್ತೆಯಾಗಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಪುಷ್ಪಕ್ ಎಕ್ಸ್‌ಪ್ರೆಸ್‌ನ ಲೋಕೋ ಪೈಲಟ್ ಟ್ರ್ಯಾಕ್‌ನಲ್ಲಿ ಕೆಂಪು ಸಿಲಿಂಡರ್ ಬಿದ್ದಿರುವುದನ್ನು ಗಮನಿಸಿ ಸಮಯಕ್ಕೆ ಸರಿಯಾಗಿ ಬ್ರೇಕ್ ಹಾಕಿ ಸಾವಿರಾರು ಜನರ ಪ್ರಾಣ ಉಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾಷಣ ಮಾಡುತ್ತಲೇ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥ – ಮೋದಿಯನ್ನ ಅಧಿಕಾರದಿಂದ ಕೆಳಗಿಳಿಸುವವರೆಗೆ ಸಾಯಲ್ಲ ಎಂದ ʻಕೈʼನಾಯಕ

ಇದೇ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ರೈಲ್ವೇ ಹಳಿಗಳ ಮೇಲೆ ಗ್ಯಾಸ್ ಸಿಲಿಂಡರ್‌ ಮತ್ತು ಸಿಮೆಂಟ್ ಬ್ರಿಕ್ಸ್‌ಗಳನ್ನಿರಿಸಿ ರೈಲು ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ ಘಟನೆ ಬೆಳಿಕಿಗೆ ಬಂದಿತ್ತು. ಇದಾದ 20 ದಿನಗಳ ಬಳಿಕ ಅಂತಹದ್ದೇ ಮತ್ತೊಂಧು ಘಟನೆ ನಡೆದಿದೆ. ಇದನ್ನೂ ಓದಿ: ತೆಲಂಗಾಣ| 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಸಂತ್ರಸ್ತೆ ಕುಟುಂಬಸ್ಥರಿಂದ ಆರೋಪಿ ಮನೆ, ಕಾರಿಗೆ ಬೆಂಕಿ

ಮುಂಬೈನಿಂದ ಲಕ್ನೋಗೆ ಹೋಗುತ್ತಿದ್ದ ರೈಲು ಗೋವಿಂದಪುರಿ ನಿಲ್ದಾಣದ ಬಳಿ ಹೋಲ್ಡಿಂಗ್ ಲೈನ್‌ಗೆ ತಲುಪಿತ್ತು. ಈ ವೇಳೆ ಸಂಜೆ 4.15ರ ಸುಮಾರಿಗೆ ಹಳಿಗಳ ಮೇಲೆ ಅಗ್ನಿ ಸುರಕ್ಷತಾ ಸಿಲಿಂಡರ್ ಬಿದ್ದಿರುವುದನ್ನು ಕಂಡ ಚಾಲಕ ಆಘಾತಕ್ಕೊಳಗಾಗಿದ್ದಾನೆ. ರೈಲಿನ ವೇಗವು ನಿಧಾನವಾಗಿದ್ದ ಕಾರಣ ತಕ್ಷಣವೇ ಬ್ರೇಕ್‌ ಹಾಕಿ, ಚಾಲಕ ಸಮಯಪ್ರಜ್ಞೆ ಮೆರೆದಿದ್ದಾರೆ. ಬಳಿಕ ನಿಯಂತ್ರಣ ಕೊಠಡಿಗೆ ತಿಳಿಸಿದ ನಂತರ ಚಾಲಕ ಸಿಲಿಂಡರ್ ಅನ್ನು ಕಾನ್ಪುರ ಸೆಂಟ್ರಲ್‌ಗೆ ತಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೊಡಬೇಕು: ಜೈರಾಮ್ ರಮೇಶ್ ಆಗ್ರಹ

Share This Article