ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

2 Min Read

– ದೀದಿ ವಿರುದ್ಧ 15 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು

ಕೋಲ್ಕತ್ತಾ: ನಂದಿಗ್ರಾಮದ ಹಿಂದೂ ಜನ ನನ್ನನ್ನ ಮತ್ತೆ ಗೆಲ್ಲಿಸಿದ್ದಾರೆ. ಇಲ್ಲಿನ ಇಡೀ ಮುಸ್ಲಿಂ ಮತಗಳು (Muslim Votes) ಟಿಎಂಸಿಗೆ ಹೋದವು. ನಾನು ಇಲ್ಲಿನ ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ ಎಂದು ಭವಾನಿಪುರ ಹಾಗೂ ನಂದಿ ಗ್ರಾಮ ಕ್ಷೇತ್ರದ ವಿಜೇತ ಅಭ್ಯರ್ಥಿ ಸುವೇಂದು ಅಧಿಕಾರಿ (Suvendu Adhikari) ಹೇಳಿದರು.

ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರೀ ಮತಗಳ ಅಂತರದಿಂದ ಚುನಾವಣೆಯಲ್ಲಿ ಎದ್ದಿದ್ದೇನೆ. ನಂದಿಗ್ರಾಮದ (Nandigram) ಹಿಂದೂ ಜನ ನನ್ನನ್ನ ಗೆಲ್ಲಿಸಿದ್ದಾರೆ. ಇಲ್ಲಿನ ಇಡೀ ಮುಸ್ಲಿಂ ಸಮುದಾಯದ ಮತಗಳು ಟಿಎಂಸಿಗೆ ಹೋಗಿವೆ. ನಾನು ನಂದಿ ಗ್ರಾಮದ ಹಿಂದೂಗಳಿಗಾಗಿ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: 8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

ಇನ್ನೂ 24 ಗಂಟೆಯಲ್ಲಿ ಟಿಎಂಸಿ (TMC) ಸರ್ವನಾಶವಾಗುತ್ತದೆ. ಈ ಭ್ರಷ್ಟ ಕುಟುಂಬ ಆಧಾರಿತ ಪಕ್ಷಕ್ಕೆ ಯಾವುದೇ ಸಿದ್ಧಾಂತವಿಲ್ಲ. ನಾವು ಗೃಹ ಸಚಿವ ಅಮಿತ್‌ ಶಾ ಪ್ರಣಾಳಿಕೆಯಲ್ಲಿ ಘೋಷಿಸಿದ ಮತ್ತು ನರೇಂದ್ರ ಮೋದಿ (Narendra Modi) ಅವರು ಮತ್ತೆ ಮತ್ತೆ ನೀಡಿದ ಭರವೆಸಗಳನ್ನು ಪೂರ್ಣಗೊಳಿಸುವ ಕೆಲಸ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು. ಇದನ್ನೂ ಓದಿ: ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

ದೀದಿ ವಿರುದ್ಧ 15,105 ಮತಗಳ ಅಂತರದ ಗೆಲುವು
ಇನ್ನೂ ಟಿಎಂಸಿ ಭದ್ರಕೋಟೆಯಾಗಿದ್ದ ಭವಾನಿಪುರದಲ್ಲಿ ಈ ಬಾರಿ ಹಾಲಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನ ಸುವೇಂದು ಅಧಿಕಾರಿ ಸೋಲಿಸಿದ್ದಾರೆ. ಬರೋಬ್ಬರಿ 15,105 ಮತಗಳ ಅಂತರದಿಂದ ದೀದಿ ಅವರನ್ನ ಪರಾಭವಗೊಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ 73,917 ಮತಗಳನ್ನು (15,105 ಮತಗಳ ಅಂತರದ ಮುನ್ನಡೆ) ಪಡೆದರೆ, ಮಮತಾ ಬ್ಯಾನರ್ಜಿ 58,812 ಮತಗಳನ್ನ ಪಡೆದುಕೊಂಡಿದ್ದಾರೆ.

Share This Article