ರಸ್ತೆಗೆ ಅಂಬಿ ಹೆಸರನ್ನಿಟ್ಟು, ಪುಣ್ಯಸ್ಮರಣೆಯಲ್ಲಿ ಮದ್ಯದ ಬಾಟಲಿಗಳನ್ನು ಅರ್ಪಿಸಿದ ಗ್ರಾಮಸ್ಥರು

Public TV
1 Min Read

ಚಿಕ್ಕಬಳ್ಳಾಪುರ: ತಾಲೂಕಿನ ತಾಳಹಳ್ಳಿ ಗ್ರಾಮದ ಗ್ರಾಮಸ್ಥರು ತಮ್ಮ ಊರಿನ ಪ್ರಮುಖ ರಸ್ತೆಗೆ ‘ಕಲಿಯುಗ ಕರ್ಣ ಅಂಬರೀಶ್’ ಎಂದು ನಾಮಕರಣ ಮಾಡುವ ಮೂಲಕ ಮಂಡ್ಯದ ಗಂಡು ದಿವಂಗತ ಅಂಬರೀಶ್ ರವರ ಪುಣ್ಯಸ್ಮರಣೆಯನ್ನು ಅದ್ಧೂರಿಯಾಗಿ ನೇರವೇರಿಸಿದ್ದಾರೆ.

ತಾಳಹಳ್ಳಿ ಗ್ರಾಮಸ್ಥರು ಇಂದೂ ಅದ್ಧೂರಿಯಾಗಿ ಅಂಬರೀಷ್‍ರವರ ಪುಣ್ಯಸ್ಮರಣೆಯನ್ನು ಮಾಡಿದ್ದಾರೆ. ಅಲ್ಲದೇ ವಿಶೇಷವಾಗಿ ಅಂಬರೀಶ್ ಭಾವಚಿತ್ರಕ್ಕೆ ಕಬ್ಬಿನ ಜಲ್ಲೆ ಹಾಗೂ ಹೂವಿನ ಅಲಂಕಾರ ಮಾಡಿ, ಪೂಜೆ-ಪುನಸ್ಕಾರ ನೇರವೇರಿಸಿದರು. ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಹೊಸ ಬಟ್ಟೆ, ಮದ್ಯದ ಬಾಟಲಿ, ಸಿಗರೇಟ್ ಸೇರಿದಂತೆ ಹೂ, ಹಣ್ಣು-ಕಾಯಿ ಸೇರಿದಂತೆ ಭರ್ಜರಿ ಬಾಡೂಟವನ್ನ ನೈವೈದ್ಯವಾಗಿ ಅರ್ಪಿಸಿದ್ದಾರೆ.

ಬಾಡೂಟದಲ್ಲಿ ಅಂಬಿ ಅವರಿಗೆ ಪ್ರಿಯವಾಗಿದ್ದ ಮುದ್ದೆ, ನಾಟಿಕೋಳಿ ಸೇರಿದಂತೆ ಬಾಡೂಟವನ್ನು ನೂರಾರು ಮಂದಿಗೆ ಉಣಬಡಿಸಿದ್ದಾರೆ. ಗ್ರಾಮಸ್ಥರು ತಮ್ಮೂರಿನ ರಸ್ತೆಗೆ ಅಂಬಿ ಹೆಸರು ನಾಮಕರಣ ಮಾಡುವ ಮೂಲಕ ಅರ್ಥಪೂರ್ಣವಾಗಿ ದಿವಂಗತ ಅಂಬರೀಶ್ ಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *