ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ

Public TV
1 Min Read

ಮಂಗಳೂರು: ಬಜರಂಗದಳ (Bajrangdal) ಮತ್ತು ಬಿಜೆಪಿ ಕಾರ್ಯಕರ್ತರ (bJP Activists) ಮೇಲೆ ತಲವಾರು ದಾಳಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.

ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಶಂಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡದಿಂದ ದಾಳಿ ನಡೆದಿರುವ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಬಿಲ್ ಕೇಳಲು ಬಂದ ಲೈನ್‍ಮೆನ್ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿ ಅರೆಸ್ಟ್

ಪೆರಾಜೆ (Peraje) ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ದಾಳಿಯಾಗಿದೆ. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್‍ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ. ಘಟನೆಯಿಂದ ಯುವಕರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯಗಳಾಗಿವೆ. ಹಲ್ಲೆಗೊಳಗಾದ ಇಬ್ಬರು ಯುವಕರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು, ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ದೂರು ನೀಡಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article