ತಮಿಳುನಾಡಿನಲ್ಲಿ `ಗಜ’ ಚಂಡಮಾರುತದ ಅಬ್ಬರ – ಇತ್ತ ಕರ್ನಾಟಕಕ್ಕೂ ತಟ್ಟಿತು ಸೈಕ್ಲೋನ್

Public TV
1 Min Read

ಚೆನ್ನೈ: ತಮಿಳುನಾಡಿನಲ್ಲಿ ಗಜ ಚಂಡಮಾರುತದ ಅಬ್ಬರ ಜೋರಾಗಿದೆ. ಪರಿಣಾಮ ನಾಗಪಟ್ಟಣಂ, ತಿರುವರೂರ್, ಕಡಲೂರು, ಪುದುಕೋಟೈ, ತಂಜಾವೂರು, ರಾಮನಾಥಪುರಂ ಸೇರಿ ಹಲವೆಡೆ ಭಾರೀ ಮಳೆಯಾಗ್ತಿದೆ. ಅಲ್ಲಲ್ಲಿ ಭೂಕುಸಿತ ಸಂಭವಿಸಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ತಮಿಳುನಾಡಿನ ಹಲವೆಡೆ 70 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪುದುಚೇರಿಯಲ್ಲಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸ್ತಿದ್ದು, ಅಲೆಗಳ ಅಬ್ಬರ ಜೋರಾಗಿದೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ತಿರುಚನಪಲ್ಲಿ-ರಾಮೇಶ್ವರಂ ಮಾರ್ಗದ ರೈಲುಗಳ ಸಂಚಾರ ರದ್ದಾಗಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರ್ನಾಟಕಕ್ಕೂ ಗಜ ಚಂಡಮಾರುತದ ತಂಗಾಳಿ ಬೀಸಿದ್ದು, ಬೆಂಗಳೂರು, ಕೋಲಾರದಲ್ಲಿ ತುಂತುರು ಮಳೆಯಾಗಿದೆ. ಇನ್ನೂ ಎರಡ್ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಮದು ಹಾವಾಮಾನ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *