ಕಾಂಗ್ರೆಸ್ ನಾಯಕ ರಾಜಣ್ಣಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್

Public TV
2 Min Read

ತುಮಕೂರು: ಸೆಪ್ಟೆಂಬರ್ 24 ರಂದು ಕೊರಿಯರ್ ನಲ್ಲಿ ನನಗೆ ಜಾರಿ ನಿರ್ದೇಶನಾಲಯದಿಂದ ನೋಟಿಸ್ ಬಂದಿದೆ. ಅಕ್ಟೋಬರ್ 8 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎಂದು ಮಾಜಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಇಡಿ ಸಹಾಯಕ ನಿರ್ದೇಶಕರು ದೂರವಾಣಿ ಕರೆ ಮಾಡಿ 8 ರಂದು ದಸರಾ ಇರುವುದರಿಂದ ರಾತ್ರಿ 8ಕ್ಕೆ ಬರಲು ಹೇಳಿದರು. ನಂತರ ಇಮೇಲ್ ಮಾಡಿದ್ದು, 9 ರಂದು ಬರಲು ಸೂಚಿಸಿದ್ದಾರೆ. ಯಾವ ಕೇಸು, ಯಾವ ದಾಖಲೆ ಎನ್ನೋದು ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ನನ್ನ ಪ್ರಕಾರ ನಾವು ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷ ಶುಗರ್ಸ್ ಕಂಪನಿಗೆ ಸಾಥ್ ಕೊಟ್ಟಿದ್ದೇವೆ. ಆ ಹಿನ್ನೆಲೆಯಲ್ಲಿ ಸಮನ್ಸ್ ನೀಡಿರಬಹುದು. ಅಪೆಕ್ಸ್ ಬ್ಯಾಂಕ್ ಆಡಿಯಲ್ಲಿ ಬರುವ ಕೆಲ ಬ್ಯಾಂಕ್‍ಗಳು ಸೇರಿಕೊಂಡು ಅವರಿಗೆ ಸುಮಾರು 300 ಕೋಟಿಯಷ್ಟು ಸಾಲ ನೀಡಿದ್ದೇವೆ. ಆದರಲ್ಲಿ ನಮ್ಮ ತುಮಕೂರು ಡಿಸಿಸಿ ಬ್ಯಾಂಕಿನಿಂದ ಹರ್ಷ ಶುಗರ್ಸ್ ಗೆ 25 ಕೋಟಿ ರೂ. ಸಾಲ ಕೊಟ್ಟಿದ್ದೇವೆ. ಈ ಹಿನ್ನೆಲೆಯಲ್ಲಿ ನೋಟಿಸ್ ಬಂದಿರಬಹುದು. ಇದರ ಬಗ್ಗೆ ನನಗೆ ಸರಿಯಾಗಿ ಗೊತ್ತಿಲ್ಲ ಎಂದು ತಿಳಿಸಿದರು.

ಇದೇ ವೇಳೆ ಮಧುಗಿರಿ ಜಿಲ್ಲೆ ಮಾಡುವಂತೆ ಸಿಎಂಗೆ ಪತ್ರ ಬರೆದಿದ್ದ ಜಿ.ಪರಮೇಶ್ವರ್ ಟಾಂಗ್ ಕೊಟ್ಟ ರಾಜಣ್ಣ, ಅವರು ಡಿಸಿಎಂ ಆಗಿದ್ದಾಗ ಯಾಕೆ ಮಧುಗಿರಿ ಜಿಲ್ಲೆ ಮಾಡಲಿಲ್ಲ. ಡಿಸಿಎಂ ಆಗಿ, ಜಿಲ್ಲಾ ಉಸ್ತುವಾರಿಯಾಗಿದ್ದರು. ಕಾಂಗ್ರೆಸ್‍ನಲ್ಲಿ ನಂಬರ್ ಒನ್ ಮುಖಂಡರಾಗಿದ್ದರು. ಎಲ್ಲಾ ಅಧಿಕಾರ ಇದ್ದಾಗ ಮಾಡದೇ ಇದ್ದವರು ಈಗ ಜಿಲ್ಲೆ ಮಾಡಿ ಎನ್ನಲು ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿ ಕಿಡಿಕಾರಿದರು.

ನಾನು ಚುನಾವಣಾ ಪ್ರಣಾಳಿಕೆಯಲ್ಲಿ ಮಧುಗಿರಿ ಜಿಲ್ಲೆ ಮಾಡುವ ಪ್ರಸ್ತಾಪ ಮಾಡಿದ್ದೆ. ಪಿಡಬ್ಲ್ಯುಡಿ ವಿಭಾಗ, ಆರ್‍ಟಿಓ ಎಲ್ಲ ಇದೆ. ಶೈಕ್ಷಣಿಕ ಜಿಲ್ಲೆ ಆಗಿದೆ. ಎಸ್‍ಪಿ ಮತ್ತು ಡಿಸಿ ಕಚೇರಿ ಹೊರತುಪಡಿಸಿದರೆ ಮಧುಗಿರಿಯಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಕಚೇರಿಗಳಿವೆ. ಆ ಮನುಷ್ಯನೇ ತೀರ್ಮಾನ ತೆಗೆದುಕೊಳ್ಳುವಾಗ ಮಾಡಲಿಲ್ಲ. ಈಗ ತಾನು ಏನೋ ಮಾಡೋಕೆ ಹೊರಟಿದ್ದೇನೆ ಎಂದು ತೋರಿಸಿಕೊಳ್ಳಲು ಪತ್ರ ಬರೆದಿದ್ದಾರೆ. ಮಧುಗಿರಿ ಜಿಲ್ಲೆ ಮಾಡಲು ನಾನೂ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆನೆ. ಸೆಪ್ಟೆಂಬರ್ 9 ರಂದು ಭೇಟಿಯಾಗಿ ಮುಖ್ಯಮಂತಿ ಅವರನ್ನು ಳಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *