ವಿಭೂತಿ ಹಾಕಿದ್ದಕ್ಕೆ ಕತ್ತೆ ಅಂದ್ರು, ಬಲವಂತವಾಗಿ ಮತಾಂತರಿಸಲು ಯತ್ನಿಸಿದ್ರು – ಶಿಕ್ಷಕಿ ವಿರುದ್ಧ ವಿದ್ಯಾರ್ಥಿನಿ ಆರೋಪ

Public TV
2 Min Read

ಚೆನ್ನೈ: ನನ್ನ ಧಾರ್ಮಿಕ ಗುರುತನ್ನು ಹೀಯಾಳಿಸಿ, ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದರು ಎಂದು ತಮಿಳುನಾಡಿನ ತಿರುಪ್ಪೂರ್‍ನ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾಳೆ.

ಹಣೆಯ ಮೇಲೆ ವಿಭೂತಿ ಹಾಕಿಕೊಂಡಿದ್ದಕ್ಕೆ ಶಿಕ್ಷಕಿ ನನ್ನನ್ನು ವಿಭೂತಿ ಕತ್ತೆ ಎಂದು ಹೀಯಾಳಿಸಿದ್ದಾರೆ. ಅಲ್ಲದೇ ಒಂದು ಬಾರಿ ನನ್ನ ಕೈಯನ್ನು ನೀರಿನಲ್ಲಿರಿಸಿ ಯೇಸುವಿನ ನಾಮವನ್ನು ಬಲವಂತವಾಗಿ ಹೇಳಿಸಿದ್ದಾರೆ. ನಂತರ ತನ್ನ ಕೈಯಲ್ಲಿದ್ದ ನೀರಿನಿಂದ ಹಿಂದೂ ಹುಡುಗಿಯರ ಹೊಟ್ಟೆಯನ್ನು ಮೂರು ಬಾರಿ ಮುಟ್ಟಿಸಿದ್ದಾರೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಸ್ಯಾಂಡಲ್‌ವುಡ್‌ ಕ್ವೀನ್ ಚಿತ್ರರಂಗಕ್ಕೆ ಬಂದು ನಿನ್ನೆಗೆ 19 ವರ್ಷ: ಸದ್ಯದಲ್ಲೇ ರೀ ಎಂಟ್ರಿ

ಪ್ರತಿ ದಿನ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಪ್ರಾರ್ಥನೆ ಮಾಡುವಂತೆ ತಿಳಿಸಿದರು. ಒಂದು ದಿನ ತರಗತಿಯಲ್ಲಿ ನಮಗೆ ಪ್ರಾಣವನ್ನು ನೀಡಿ, ನಮ್ಮನ್ನು ರಕ್ಷಿಸುತ್ತಿರುವವರು ಯಾರು ಎಂದು ಶಿಕ್ಷಕಿ ಕೇಳಿದ್ದರು. ಈ ವೇಳೆ ನಾವು ಬೇರೆ, ಬೇರೆ ಹೆಸರುಗಳನ್ನು ಹೇಳಿದ್ದಕ್ಕೆ, ನೀವು ಯೇಸುವಿನ ಹೆಸರನ್ನು ಏಕೆ ಹೇಳಲಿಲ್ಲ ಎಂದು ನಮ್ಮನ್ನು ಪ್ರಶ್ನಿಸಿದ್ದರು ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

ಶಿಕ್ಷಕಿಯೊಬ್ಬರು ದೇವರುಗಳಲ್ಲಿ ಬಲಶಾಲಿ ಯಾರು ಎಂದು ಕೇಳಿದ್ದರು. ಅದಕ್ಕೆ ನಾನು ಶಿವ ಎಂದು ಹೇಳಿದ್ದೆ. ಆದರೆ ಅವರು ನನ್ನ ಹೇಳಿಕೆಯನ್ನು ಅಲ್ಲಗಳೆದರು. ಜೀಸಸ್ ದೇವರುಗಳಲ್ಲಿ ಬಲಶಾಲಿ ವಾದಿಸಿದರು ಎಂದು ವಿದ್ಯಾರ್ಥಿನಿ ತನಗಾದ ಅಪಮಾನವನ್ನು ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಈ ವಿಚಾರದ ಬಗ್ಗೆ ವಿದ್ಯಾರ್ಥಿನಿ ಪೋಷಕರು, ಶಿಕ್ಷಕಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಈ ಸಂಬಂಧ ತನಿಖೆ ಆರಂಭಿಸಲಾಗಿದೆ.

ಈ ಘಟನೆ ಸಂಬಂಧ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ನಾರಾಯಣ ತ್ರಿಪಾಠಿ, ಆಡಳಿತಾರೂಢ ಡಿಎಂಕೆ ಸರ್ಕಾರ ಬಲವಂತದ ಮತಾಂತರದ ಘಟನೆಗಳಿಗೆ ಮೂಕಪ್ರೇಕ್ಷಕವಾಗಿದೆ. ಈ ವಿಚಾರವಾಗಿ ಪೊಲೀಸರು ಮತ್ತು ಸರ್ಕಾರ ಕೂಡಲೇ ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಶಾಲಾ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ. ಮತಾಂತರವು ಅತ್ಯಂತ ಅಪಾಯಕಾರಿ. ತಮಿಳುನಾಡಿನಲ್ಲಿ ತಕ್ಷಣವೇ ಮತಾಂತರ ವಿರೋಧಿ ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *