ವಿವಿಧ ಬಗೆಯ ಹಣ್ಣುಗಳನ್ನು ಬೆಳೆದು ವರ್ಷಕ್ಕೆ 6 ಲಕ್ಷ ಸಂಪಾದಿಸಿ ಇತರರಿಗೆ ಮಾದರಿಯಾದ ಶಿಕ್ಷಕ

Public TV
1 Min Read

ಬೀದರ್: ಬರಡು ಭೂಮಿಯಲ್ಲಿ ಮಿಶ್ರ ಬಂಪರ್ ಹಣ್ಣು ಗಿಡಗಳನ್ನು ಬೆಳೆದು ಬರಗಾಲದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಇತರ ರೈತರಿಗೆ ಶಿಕ್ಷಕ ಕಮ್ ರೈತ ಮಾದರಿಯಾಗಿದ್ದಾರೆ. ನಾಲ್ಕು ಎಕರೆ ಭೂಮಿಯಲ್ಲಿ ಹತ್ತಾರು ವಿವಿಧ ಹಣ್ಣುಗಳನ್ನು ಬೆಳೆದು ಪ್ರತಿ ವರ್ಷ 5 ರಿಂದ 6 ಲಕ್ಷ ಸಂಪಾದನೆ ಮಾಡುವ ಮೂಲಕ ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ.

ಜಿಲ್ಲೆಯ ಭಾಲ್ಕಿ ತಾಲೂಕಿನ ಅಂಬೆಸಾಂಗವಿ ಗ್ರಾಮದ ಬಳಿಯ ಬರಡು ಭೂಮಿಯನ್ನು ಕೃಷಿ ಭೂಮಿಯಾಗಿ ಮಾಡಿ ಶಿಕ್ಷಕ ಕಮ್ ಮಾದರಿ ರೈತ ಸಾಧನೆ ಮಾಡಿದ್ದಾರೆ. ಭಾಲ್ಕಿ ಪಟ್ಟಣ್ಣದ ಖಾಸಗಿ ಶಾಲೆಯಲ್ಲಿ ಆಂಗ್ಲ ಭಾಷೆಯ ಶಿಕ್ಷಕರಾಗಿರುವ ಗಣಪತಿ ಬೋಚ್ರೆ ಸತತ ಪರಿಶ್ರಮದಿಂದ ಇಂದು ಮಾದರಿ ರೈತರಾಗಿದ್ದಾರೆ. ನಾಲ್ಕು ಎಕರೆ ಬರಡು ಭೂಮಿಯನ್ನು 5 ವರ್ಷಗಳಲ್ಲಿ ಸತತ ಪರಿಶ್ರಮ ಹಾಕಿ ಕೃಷಿ ಭೂಮಿಯನ್ನಾಗಿ ಮಾಡಿಕೊಂಡು ಇಂದು ಪ್ರತಿವರ್ಷ 5 ರಿಂದ 6 ಲಕ್ಷ ಸಂಪಾದನೆ ಮಾಡುತ್ತಿದ್ದಾರೆ. ಇವರ ಈ ಪರಿಶ್ರಮ ನೋಡಿದ ಜಿಲ್ಲೆಯ ರೈತರು ಅವರನ್ನೇ ಅನುಸರಿಸುತ್ತಿದ್ದಾರೆ. ರೈತರು ಸರಿಯಾಗಿ ಪ್ಲಾನ್ ಮಾಡಿ ಕೃಷಿ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಶ್ನೆಯೇ ಬರಲ್ಲ ಎಂದು ಮಾದರಿ ರೈತ ತಿಳಿಸಿದ್ದಾರೆ.

ಮಾವು, ನೇರಳೆ, ದಾಳಿಂಬೆ, ಮೊಂಸಬಿ, ಕಿತ್ತಳೆ, ಜಾಪಳ್, ಸಪೋಟಾ ಗಿಡಗಳು ಸೇರಿದಂತೆ ಹಲವಾರು ಹಣ್ಣಿನ ಗಡಿಗಳನ್ನು ಬೆಳೆದು ಸೈ ಎನಿಸಿಕೊಂಡಿದ್ದಾರೆ. ಇದರಲ್ಲಿ ವಿಶೇಷವಾಗಿ ಮಾವಿನ ಹಣ್ಣನಲ್ಲಿ ನಾಲ್ಕು ವಿಧಗಳ ಗಿಡಗಳನ್ನು ವಿದೇಶದಿಂದ ತಂದು ಹಾಕಿದ್ದಾರೆ. ಸಂರ್ಪೂಣವಾಗಿ ಸಾವಯವ ಗೊಬ್ಬರವನ್ನು ಹಾಕಿ ಹಣ್ಣಿನ ಗಿಡಗಳನ್ನು ಬೆಳೆಸಿದ್ದು ಜಿಲ್ಲೆ, ರಾಜ್ಯ ಸೇರಿದಂತೆ ರಾಷ್ಟ್ರದಲ್ಲೂ ಇವುಗಳಿಗೆ ಬೇಡಿಕೆ ಇದೆ. ಜಿಲ್ಲೆಯಲ್ಲಿ ಮುಂಗಾರು, ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿ ಕಾಲ ಕಳೆಯುತ್ತಿದ್ದು ಈ ರೀತಿ ಮಾದರಿ ರೈತನ ಸಾಧನೆ ನೋಡಿ ಸ್ಫೂರ್ತಿಯಾಗಿದ್ದಾರೆ. ಸರ್ಕಾರಗಳು ರೈತರಿಗೆ ಯಾವುದೇ ಸಹಕಾರ ನೀಡದೆ ರೈತರಿಗೆ ಶಾಪವಾಗಿದ್ದು, ಈ ರೀತಿಯ ಸಾಧನೆ ಮೂಲಕ ಸರ್ಕಾರಕ್ಕೆ ಚಾಟಿ ಬೀಸುವ ಕೆಲಸ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *