ಮದುವೆಯ ನೆಪದಲ್ಲಿ ಶಿಕ್ಷಕನಿಂದ ಪದೇ, ಪದೇ ಅತ್ಯಾಚಾರ

Public TV
1 Min Read

ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಪದೇ ಪದೇ ಅತ್ಯಾಚಾರ ಎಸಗಿದ ಉತ್ತರ ಪ್ರದೇಶದ ಶಿರ್ ಘರ್ ಶಿಕ್ಷಕನ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ನಾಲ್ಕು ವರ್ಷದ ಹಿಂದೆ ಮಹಿಳೆ ಮದ್ರಾಸಕ್ಕೆ ಬಂದಿದ್ದರು. ಈ ವೇಳೆ ಆರೋಪಿ ಕೂಡ ಆಕೆಯ ಜೊತೆಯಲ್ಲಿಯೇ ಅಧ್ಯಯನ ಮಾಡುತ್ತಿದ್ದ. ಆದರೆ ನಂತರ ಆತ ಮದ್ರಾಸದಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಈ ವೇಳೆ ಇಬ್ಬರು ಪರಸ್ಪರ ಪ್ರೀತಿಸಲು ಶುರುಮಾಡಿರುವುದಾಗಿ ಸಂತ್ರಸ್ತೆ ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ. ಇದನ್ನೂ ಓದಿ: ಪ್ಯಾಂಟ್ ಬೆಲ್ಟ್‌ನಲ್ಲಿ ಚಿನ್ನದ ಬಿಸ್ಕೆಟ್- ಸಿಸಿಬಿ ಬಲೆಗೆ ಬಿದ್ದ ಆರೋಪಿ

ಸಂತ್ರಸ್ತೆಗೆ ಮದುವೆಯಾಗುವುದಾಗಿ ನಂಬಿಸಿ ಆರೋಪಿ ಪದೇ, ಪದೇ ಅತ್ಯಾಚಾರ ನಡೆಸಿದ್ದಾನೆ ಮತ್ತು ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ. ಒಮ್ಮೆ ಸಂತ್ರಸ್ತೆ ಆರೋಪಿ ಮನೆಗೆ ಹೋದಾಗ, ಆಕೆಗೆ ಜೀವ ಬೆದರಿಕೆ ಹಾಕಲಾಗಿದ್ದು, ಊರು ಬಿಟ್ಟು ಹೋಗುವಂತೆ ಬೆದರಿಸಿರುವುದಾಗಿ ಮಹಿಳೆ ಹೇಳಿದ್ದು, ಇದೀಗ ಈ ಸಂಬಂಧ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಿಟ್ಟು ಮತ್ತೆ ಕಾಂಗ್ರೆಸ್ ಸೇರ್ತಾರಾ ಬಾಬುರಾವ್ ಚಿಂಚನಸೂರ್..?

Share This Article
Leave a Comment

Leave a Reply

Your email address will not be published. Required fields are marked *