ಅಮಿತ್ ಶಾಗೆ ಗೃಹ, ಸೀತಾರಾಮನ್‍ಗೆ ಹಣಕಾಸು – ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ?

Public TV
4 Min Read

ನವದೆಹಲಿ: ಬಿಜೆಪಿಯ ಚಾಣಕ್ಯ ಅಮಿತ್ ಶಾ ಅವರಿಗೆ ಮೋದಿ 2 ಸರ್ಕಾರದಲ್ಲಿ ಗೃಹ ಇಲಾಖೆ ಸಿಕ್ಕಿದೆ. ಈ ಹಿಂದೆ ಗೃಹ ಇಲಾಖೆ ನಿರ್ವಹಿಸಿದ್ದ ರಾಜನಾಥ್ ಸಿಂಗ್ ಅವರಿಗೆ ಈ ಬಾರಿ ರಕ್ಷಣಾ ಇಲಾಖೆಯನ್ನು ಮೋದಿ ನೀಡಿದ್ದಾರೆ.

ರಫೇಲ್ ವಿವಾವದವನ್ನು ಸಮರ್ಥವಾಗಿ ನಿರ್ವಹಿಸಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆ ಸಿಕ್ಕಿದೆ. ಕಳೆದ ಬಾರಿ ನಿರ್ವಹಿಸಿದ್ದ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಖಾತೆಯನ್ನೇ ಮೋದಿ ಮತ್ತೊಮ್ಮೆ ನಿತಿನ್ ಗಡ್ಕರಿ ಅವರಿಗೆ ನೀಡಿದ್ದಾರೆ. ಧರ್ಮೆಂದ್ರ ಪ್ರಧಾನ್ ಪೆಟ್ರೋಲಿಯಂ, ಪಿಯೂಶ್ ಗೋಯಲ್ ರೈಲ್ವೇ, ಜೈ ಶಂಕರ್ ಅವರಿಗೆ ವಿದೇಶಾಂಗ ಇಲಾಖೆ ಸಿಕ್ಕಿದೆ.

ಗುಜರಾತ್ ನಲ್ಲಿ ಮೋದಿ ಸಿಎಂ ಆಗಿದ್ದಾಗ ಅಮಿತ್ ಶಾ ಗೃಹ ಖಾತೆಯನ್ನು ನೋಡಿಕೊಳ್ಳುತ್ತಿದ್ದರು. ಈಗ ಮತ್ತೊಮ್ಮೆ ಅಮಿತ್ ಶಾ ಮೋದಿ ಕ್ಯಾಬಿನೆಟ್‍ನಲ್ಲಿ ಗೃಹ ಖಾತೆಯನ್ನು ನಿರ್ವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ – ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ, ಪರಮಾಣು ಶಕ್ತಿ ಇಲಾಖೆ, ಬಾಹ್ಯಾಕಾಶ ಇಲಾಖೆ, ಹಂಚಿಕೆಯಾಗದ ಎಲ್ಲ ಖಾತೆಗಳು.

ಸಂಪುಟ ದರ್ಜೆ ಸಚಿವರು:
ರಾಜನಾಥ್ ಸಿಂಗ್ – ರಕ್ಷಣೆ
ಅಮಿತ್ ಶಾ – ಗೃಹ, ಸಣ್ಣ ಮತ್ತು ಮಧ್ಯಮ ಉದ್ಯಮ
ನಿತಿನ್ ಗಡ್ಕರಿ – ಸಾರಿಗೆ ಮತ್ತು ರಾಷ್ಟ್ರಿಯ ಹೆದ್ದಾರಿ
ಸದಾನಂದ ಗೌಡ – ರಾಸಾಯನಿಕ ಮತ್ತು ರಸಗೊಬ್ಬರ
ನಿರ್ಮಲಾ ಸೀತಾರಾಮನ್ – ಹಣಕಾಸು, ಕಾರ್ಪೋರೆಟ್ ವ್ಯವಹಾರ
ರಾಮ್ ವಿಲಾಸ್ ಪಾಸ್ವಾನ್ – ಆಹಾರ ಮತ್ತು ಸಾರ್ವಜನಿಕ ವಿತರಣೆ

ನರೇಂದ್ರ ಸಿಂಗ್ ತೋಮರ್ – ಕೃಷಿ, ಗ್ರಾಮೀಣ ಅಭಿವೃದ್ಧಿ, ರೈತ ಕಲ್ಯಾಣ, ಪಂಚಾಯತ್ ರಾಜ್
ರವಿಶಂಕರ್ ಪ್ರಸಾದ್ – ಕಾನೂನು ಮತ್ತು ನ್ಯಾಯ, ಸಂವಹನ ಮತ್ತು ಮಾಹಿತಿ, ತಂತ್ರಜ್ಞಾನ
ಹರ್ಸಿಮ್ರತ್ ಕೌರ್ – ಆಹಾರ ಸಂಸ್ಕರಣಾ ಕೈಗಾರಿಕೆ
ತಾವರ್ ಚಂದ್ ಗೆಹ್ಲೋಟ್ – ಸಾಮಾಜಿಕ ಕಲ್ಯಾಣ ಮತ್ತು ಸಬಲೀಕರಣ
ಎಸ್.ಜೈಶಂಕರ್ – ವಿದೇಶಾಂಗ ಇಲಾಖೆ
ರಮೇಶ್ ಪೋಖ್ರಿಯಾಲ್ – ಮಾನವ ಸಂಪನ್ಮೂಲ
ಅರ್ಜುನ್ ಮುಂಡಾ – ಬುಡಕಟ್ಟು ಅಭಿವೃದ್ಧಿ

ಸ್ಮೃತಿ ಇರಾನಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಡಾ.ಹರ್ಷವರ್ಧನ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವಿಜ್ಞಾನ, ತಂತ್ರಜ್ಞಾನ ಮತ್ತು ಭೂ ವಿಜ್ಞಾನ
ಪ್ರಕಾಶ್ ಜಾವ್ಡೇಕರ್ – ಪರಿಸರ, ಅರಣ್ಯ, ಹವಾಮಾನ ಬದಲಾವಣೆ ಮತ್ತು ಪ್ರಸಾರ ಮತ್ತು ಮಾಹಿತಿ ತಂತ್ರಜ್ಞಾನ
ಪಿಯುಷ್ ಗೋಯಲ್ – ರೈಲ್ವೇ, ವಾಣಿಜ್ಯ ಮತ್ತು ಕೈಗಾರಿಕೆ
ಧರ್ಮೇಂದ್ರ ಪ್ರಧಾನ್ – ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಉಕ್ಕು

ಮುಕ್ತಾರ್ ಅಬ್ಬಾಸ್ ನಖ್ವಿ – ಅಲ್ಪ ಸಂಖ್ಯಾತ ಕಲ್ಯಾಣ
ಪ್ರಹ್ಲಾದ್ ಜೋಷಿ – ಸಂಸದೀಯ ವ್ಯವಹಾರ, ಕಲಿದ್ದಲು ಮತ್ತು ಗಣಿಗಾರಿಕೆ
ಮಹೇಂದ್ರನಾಥ್ ಪಾಂಡೆ – ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತೆ
ಅರವಿಂದ್ ಸಾವಂತ್ – ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ
ಗಿರಿರಾಜ್ ಸಿಂಗ್ – ಪಶು ಸಂಗೋಪನೆ ಮತ್ತು ಹೈನುಗಾರಿಕೆ ಮತ್ತು ಮೀನುಗಾರಿಕೆ
ಗಜೇಂದ್ರ ಸಿಂಗ್ ಶೇಖಾವತ್‌ – ಜಲ ಶಕ್ತಿ

ರಾಜ್ಯ ಖಾತೆ ಸಚಿವರು:
ಫಗನ್ ಸಿಂಗ್ ಕುಲಸ್ತೆ – ಉಕ್ಕು
ಅಶ್ವಿನಿ ಚೌಬೆ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಬಿಕನೇರ್ ಅರ್ಜುನ್ ರಾಮ್ ಮೇಘವಾಲ್ – ಸಂಸದೀಯ ವ್ಯವಹಾರ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ
ವಿ.ಕೆ.ಸಿಂಗ್ – ರಸ್ತೆ ಸಾರಿಗೆ ಮತ್ತು ಹೆದ್ದಾರಿ
ಕೃಷ್ಣಪಾಲ್ ಗುರ್ಜರ್ – ಸಾಮಾಜಿಕ ನ್ಯಾಯ ಸಬಲೀಕರಣ
ರಾವ್ ಸಾಹೇಬ್ ದಾನವೆ ರಾವ್ – ಗ್ರಾಹಕ ವ್ಯವಹಾರ ಮತ್ತು ಆಹಾರ ಮತ್ತು ಸಾರ್ವಜನಿಕರ ವಿತರಣೆ
ಕಿಶಾನ್ ರೆಡ್ಡಿ- ಗೃಹ ಇಲಾಖೆ

ಪುರುಷೋತ್ತಮ ರುಪಾಲಾ – ಕೃಷಿ ಮತ್ತು ರೈತರ ಕಲ್ಯಾಣ
ರಾಮದಾಸ್ ಅಠಾವಳೆ – ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
ಸಾಧ್ವಿ ನಿರಂಜನ್ ಜ್ಯೋತಿ – ಗ್ರಾಮೀಣ ಅಭಿವೃದ್ಧಿ
ಬಾಬುಲ್ ಸುಪ್ರಿಯೋ – ಪರಿಸರ, ಅರಣ್ಯ, ಹವಾಮಾನ ಬದಲಾವಣೆ

ಸಂಜೀವ್ ಬಲಿಯಾನ್ – ಪಶುಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆ
ಸಂಜಯ್ ಧೋತ್ರೆ – ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಂವಹನ, ಮಾಹಿತಿ ತಂತ್ರಜ್ಞಾನ
ಅನುರಾಗ್ ಠಾಕೂರ್ – ಹಣಕಾಸು ಮತ್ತು ಕಾರ್ಪೋರೆಟ್ ವ್ಯವಹಾರ
ಸುರೇಶ್ ಅಂಗಡಿ – ರೈಲ್ವೇ ಖಾತೆ
ನಿತ್ಯಾನಂದ್ ರಾಯ್ – ಗೃಹ ವ್ಯವಹಾರ ಖಾತೆ

ರತನ್ ಲಾಲ್ ಕಟಾರಿಯಾ – ಜಲ ಶಕ್ತಿ, ಸಾಮಾಜಿಕ ನ್ಯಾಯ, ಸಬಲೀಕರಣ,
ವಿ.ಮುರಳೀಧರನ್ – ವಿದೇಶಾಂಗ ಮತ್ತು ಸಂಸದೀಯ ವ್ಯವಹಾರ,
ರೇಣುಕಾ ಸಿಂಗ್ – ಬುಡಕಟ್ಟು ವ್ಯವಹಾರ,
ಸೋಮ್ ಪ್ರಕಾಶ್ – ವಾಣಿಜ್ಯ ಮತ್ತು ವ್ಯವಹಾರ

ರಾಮೇಶ್ವರ್ ತೇಲಿ – ಆಹಾರ ಸಂಸ್ಕರಣ ಉದ್ಯಮ
ಸಾರಂಗಿ – ಸಣ್ಣ ಮತ್ತು ಮಧ್ಯಮ ಉದ್ಯಮ, ಪಶು ಸಂಗೋಪನೆ, ಮೀನುಗಾರಿಕೆ,
ಕೈಲಾಶ್ ಚೌಧರಿ – ಕೃಷಿ ಮತ್ತು ರೈತರ ಕಲ್ಯಾಣ
ದೆಬೊಶ್ರೀ ಚೌಧರಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

ಸ್ವತಂತ್ರ ಖಾತೆ ಸಚಿವರು:
ಸಂತೋಷ್ ಕುಮಾರ್ ಗಂಗ್ವಾರ್ – ಕಾರ್ಮಿಕ ಮತ್ತು ಉದ್ಯೋಗ
ಇಂದ್ರಜಿತ್ ಸಿಂಗ್ – ಸಾಂಖ್ಯಿಕ ಅಭಿವೃದ್ಧಿ ಮತ್ತು ಅನುಷ್ಠಾನ ಖಾತೆ
ಶ್ರೀಪಾದ್ ಎಸ್ ನಾಯಕ್- ಆಯುಶ್, ರಕ್ಷಣಾ
ಜಿತೇಂದ್ರ ಸಿಂಗ್- ಈಶಾನ್ಯ ಅಭಿವೃದ್ಧಿ ಮತ್ತು ಬಾಹ್ಯಾಕಾಶ, ಪರಮಾಣು ಶಕ್ತಿ

ಕಿರಣ್ ರಿಜಿಜು- ಕ್ರೀಡಾ ಮತ್ತು ಯುವ ಸಬಲೀಕರಣ – ಅಲ್ಪ ಸಂಖ್ಯಾತ
ಪ್ರಹ್ಲಾದ್ ಸಿಂಗ್ ಪಟೇಲ್ – ಸಂಸ್ಕ್ರತಿ ಮತ್ತು ಪ್ರವಾಸ್ಯೋದಮ
ರಾಜ್‍ಕುಮಾರ್ ಸಿಂಗ್ – ಇಂಧನ, ನವೀಕರಿಸಬಹುದಾದ ಶಕ್ತಿ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮ ಶೀಲತೆ
ಹರ್ದೀಪ್ ಸಿಂಗ್ ಪುರಿ – ವಸತಿ ಮತ್ತು ನಗರಾಭಿವೃದ್ಧಿ, ನಾಗರೀಕ ವಿಮಾನಯಾನ, ವಾಣಿಜ್ಯ ಮತ್ತು ಕೈಗಾರಿಕೆ
ಮನಸುಖ್ ಮಾಂಡವ್ಯ – ಹಡಗು, ರಾಸಾಯನಿಕ ಮತ್ತು ರಸಗೊಬ್ಬರ

Share This Article
Leave a Comment

Leave a Reply

Your email address will not be published. Required fields are marked *