ಮುಂಬೈ: ಜಾಗಿಂಗ್ಗೆ (Jogging) ಹೋಗಿದ್ದ ತಂತ್ರಜ್ಞಾನ ಸಂಸ್ಥೆಯೊಂದರ ಸಿಇಓಗೆ (Tech CEO) ಕಾರೊಂದು (Car) ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಮುಂಬೈನ (Mumbai) ವರ್ಲಿ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಮಹಿಳೆಯನ್ನು ರಾಜಲಕ್ಷ್ಮಿ ರಾಮಕೃಷ್ಣ (42) ಎಂದು ಗುರುತಿಸಲಾಗಿದೆ. ದಾದರ್ ಮಾತುಂಗಾ ಪ್ರದೇಶದ ನಿವಾಸಿಯಾಗಿರುವ ರಾಜಲಕ್ಷ್ಮಿ ತನ್ನ ಪತಿಯೊಂದಿಗೆ ಬೆಳಗ್ಗೆ ಜಾಗಿಂಗ್ ಹೋಗಿದ್ದರು. ಅಲ್ಲಿಂದ ಹಿಂದಿರುಗುವಾಗ ವರ್ಲಿ ಬಾಂದ್ರಾ ಬಳಿ ಈ ಘಟನೆ ಸಂಭವಿಸಿದೆ. ಇದನ್ನೂ ಓದಿ: ಮೋದಿ ಫೋಟೋ ಸ್ಟೇಟಸ್ ಹಾಕಿದ್ದ ಯವಕನಿಗೆ ಹಲ್ಲೆ – ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್
ಹಿಂಬದಿಯಿಂದ ವೇಗವಾಗಿ ಬಂದ ಎಸ್ಯುವಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಾಜಲಕ್ಷ್ಮಿಗೆ ಡಿಕ್ಕಿ ಹೊಡೆದಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚಾಲಕ ಸುಮರ್ ಮರ್ಚೆಂಟ್ (23)ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ವೇಳೆ ಕಾರಿನ ಚಾಲಕ ಸುಮೇರ್ ಮರ್ಚೆಂಟ್ ಕೂಡ ಗಾಯಗೊಂಡಿದ್ದಾನೆ. ಕಾರು ಚಾಲಕ ಸುಮೇರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಾನೆ. ಈತ ಮುಂಬೈನ ತಾರ್ಡಿಯೋ ಪ್ರದೇಶದಲ್ಲಿ ವಾಸವಿದ್ದ. ಘಟನೆಗೆ ಸಂಬಂಧಿಸಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರಕ್ಕೆ ಬಂತು ಮೊದಲ ಎಫ್ಡಿಐ – ಶಾಪಿಂಗ್ ಮಾಲ್ ನಿರ್ಮಾಣಕ್ಕೆ ಭೂಮಿ ಪೂಜೆ