ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಪ್ರಕರಣ- ತಂದೆಯಿಂದ ಕಂಪೆನಿ ವಿರುದ್ಧ ದೂರು

Public TV
1 Min Read

ಬೆಂಗಳೂರು: ಬಹುಮಹಡಿಯ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಉದ್ಯೋಗಿಯಾಗಿರುವ ಟೆಕ್ಕಿ ತಂದೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಭವೇಶ್ ಸೋಮವಾರ ಸಂಜೆ ಕಂಪೆನಿಯ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭವೇಶ್ ಜೈಸ್ವಾನ್ ತಂದೆ ಮಹೇಂದ್ರ ಜೈಸ್ವಾನ್ ಎಂಯು ಸಿಗ್ಮಾ ಕಂಪೆನಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಕಂಪೆನಿಯಲ್ಲಿ ತನ್ನ ಮಗನಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಕಂಪೆನಿಯ ಕೆಲಸದ ಒತ್ತಡದ ಬಗ್ಗೆ ಭವೇಶ್ ನನ್ನ ಬಳಿ ಹೇಳಿಕೊಂಡಿದ್ದನು. ಕಂಪೆನಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಭವೇಶ್ ತಂದೆ ದೂರು ನೀಡಿದ್ದಾರೆ.

ಆತ್ಮಹತ್ಯೆ ಪ್ರಕರಣ ಸಂಬಂಧ ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಟೆಕ್ಕಿ ತಂದೆಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭವೇಶ್ ಒಂದು ವರ್ಷದ ಹಿಂದೆ ಉದ್ಯೋಗಕ್ಕಾಗಿ ಮಧ್ಯಪ್ರದೇಶದಿಂದ ಬೆಂಗಳೂರಿಗೆ ಆಗಮಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *