ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ

Public TV
0 Min Read

ಹಾಸನ: ಅಪ್ರಾಪ್ತ ಪ್ರೇಮಿಗಳಿಬ್ಬರು ಕಾಫಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದಲ್ಲಿ ನಡೆದಿದೆ.

ಹಾರ್ಲೆ ಗ್ರಾಮದ ಸಹನಾ(16) ಮತ್ತು ಕುಂಬರಡಿ ಗ್ರಾಮದ ಅರುಣ್(17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳು. ಬಾಲ್ಯದಿಂದ ಇಬ್ಬರು ಪರಿಚಯಸ್ಥರಾಗಿದ್ದು ಇಬ್ಬರೂ ತುಂಬಾ ಪ್ರೀತಿಸುತಿದ್ದರು ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಇವರಿಬ್ಬರು ಕಳೆದ ನಾಲ್ಕು ದಿನಗಳಿಂದ ಕಾಣೆಯಾಗಿದ್ದರು. ಇಂದು ಕೊಳೆತ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ.

ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *