ಉಜ್ಜಯಿನಿ ಮಹಾಕಾಳೇಶ್ವರ ಮಂದಿರದಲ್ಲಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರ ಗಲಾಟೆ

Public TV
1 Min Read

ಭೋಪಾಲ್: ಉಜ್ಜಯಿನಿಯ ಮಹಾಕಾಳೇಶ್ವರ ಮಂದಿರದಲ್ಲಿ ಸಂಸದ, ಬಿಜೆಪಿ ಯುವ ಮೊರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಬೆಂಬಲಿಗರು, ಮತ್ತು ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ.

ದೇವಸ್ಥಾನದ ಭೇಟಿಗೆ ತೇಜಸ್ವಿ ಸೂರ್ಯ ತೆರಳಿದ ವೇಳೆ ಈ ಗಲಭೆ ನಡೆದಿದೆ. ಉಜ್ಜಯಿನಿಗೆ ತೆರಳಿದ್ದ ತೇಜಸ್ವಿ ಸೂರ್ಯ ನಿನ್ನೆ ಬೆಳಗ್ಗೆ ದೇವರ ದರ್ಶನಕ್ಕೆ ತೆರಳಿದ್ದರು. ಪೂಜೆಗಾಗಿ ಸೂರ್ಯ ಗರ್ಭಗುಡಿಯ ಕಡೆಗೆ ಹೋದರು. ಅವರನ್ನೇ ಅನುಸರಿಸಿದ ಬೆಂಬಲಿಗರು, ಕಾರ್ಯಕರ್ತರು ಗರ್ಭಗುಡಿ ಪ್ರವೇಶಿಸಲು ಪ್ರಯತ್ನಿಸಿದರು. ಈ ವೇಳೆ ಗರ್ಭಗುಡಿ ಪ್ರವೇಶ ಮಾಡದಂತೆ ಮಂದಿರದ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಇದನ್ನೂ ಓದಿ: ಮೋದಿಗೆ ರಾಖಿ ಕಟ್ಟಿದ ಮಕ್ಕಳು

ಗರ್ಭಗುಡಿ ಪ್ರವೇಶಕ್ಕೆ ನಿರಾಕರಿಸುತ್ತಿದ್ದಂತೆ ಸಿಟ್ಟಿಗೆದ್ದ ಕಾರ್ಯಕರ್ತರು, ಮಂದಿರದ ಸಿಬ್ಬಂದಿ ಜೊತೆಗೆ ಗಲಾಟೆ ನಡೆಸಿದರು. ಬ್ಯಾರಿಕೇಡ್‍ಗಳನ್ನು ತೆಗೆದುಹಾಕಿ ಒಳಗೆ ಪ್ರವೇಶಿಸಿದರು. ಈ ವೇಳೆ ದೇವಸ್ಥಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿದೆ. ಇದನ್ನೂ ಓದಿ: ಕಾಸರಗೋಡು ಮಸೀದಿಗೆ ಹೋಗಿದ್ದ ಹಂತಕರು – SDPI, PFI ಲಿಂಕ್‌, ವಾರಂಟ್ ಜಾರಿ ಮಾಡಿ ಆಸ್ತಿ ಸೀಜ್‌

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *