ಫಿಕ್ಸರ್ ಸಿದ್ದು ಆಗ್ಬೇಡಿ ಎಂದು ಸಿಎಂ ಗೆ ಸಲಹೆ ನೀಡಿದ ತೇಜಸ್ವಿನಿ ರಮೇಶ್

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುವ ಮೂಲಕ ಹೆಸರು ಮಾಡಿ. ಅದನ್ನು ಬಿಟ್ಟು ಎಸಿಬಿ ಮೂಲಕ ನಿಮ್ಮ ರಾಜಕೀಯ ಪ್ರತಿಸ್ಪರ್ಧಿಗಳನ್ನು ಫಿಕ್ಸ್ ಮಾಡುವ ಮೂಲಕ ಫಿಕ್ಸರ್ ಸಿದ್ದು ಆಗಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ಟಾಂಗ್ ನೀಡಿದರು.

ರಾಜ್ಯ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸೋಮವಾರ ರಾಜ್ಯಪಾಲರನ್ನ ಭೇಟಿ ಮಾಡಿ ಎಸಿಬಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸುತ್ತೆವೆ. ಸೋಮವಾರ ರಾಜ್ಯಪಾಲರನ್ನ ಭೇಟಿ ಆಗಿ ಸಿದ್ದರಾಮಯ್ಯ ಸರ್ಕಾರ ವಜಾ ಮಾಡಲು ಬಿಜೆಪಿ ನಿಯೋಗ ತೆರಳಲಿದೆ. ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ.

ಇನ್ನೂ ಸೋಮವಾರ ರಾಜೀನಾಮೆ ಕೇಳಿ ಬೃಹತ್ ಹೋರಾಟ ನಡೆಸಲು ಬಿಜೆಪಿ ನಿರ್ಧಾರ ಮಾಡಿದೆ.

 

Share This Article
Leave a Comment

Leave a Reply

Your email address will not be published. Required fields are marked *