ಮುರಿದು ಬಿತ್ತಾ ತೆಲುಗು ನಟ ಶರ್ವಾನಂದ್ ನಿಶ್ಚಿತಾರ್ಥ?

Public TV
1 Min Read

ಟಾಲಿವುಡ್ (Tollywood) ಅಂಗಳದಲ್ಲಿ ಬಿಸಿ ಬಿಸಿ ಸಮಾಚಾರವೊಂದು ಸದ್ದು ಮಾಡ್ತಿದೆ. ಸ್ಟಾರ್ ನಟ ಶರ್ವಾನಂದ್(Sharwanand), ಖಾಸಗಿ ಸಮಾಚಾರವೊಂದು ಭಾರಿ ಸೌಂಡ್ ಮಾಡ್ತಿದೆ. ಇತ್ತೀಚಿಗಷ್ಟೇ ಅದ್ದೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದ ಶರ್ವಾನಂದ್ ನಿಶ್ಚಿತಾರ್ಥ (Engagement) ಮುರಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.

ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟ ಶರ್ವಾನಂದ್, ಭಿನ್ನ ಪಾತ್ರಗಳ ಮೂಲಕ ರೆಲುಗು ಪ್ರೇಕ್ಷಕರ ಮನಗೆದ್ದಿದ್ದರು. ಇತ್ತೀಚಿಗಷ್ಟೇ ರಕ್ಷಿತಾ (Rakshitha Reddy) ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಸಿಹಿಸುದ್ದಿ ನೀಡಿದ್ದರು.

ಈ ವರ್ಷದ ಆರಂಭ ಜನವರಿಯಲ್ಲಿ ಗುರುಹಿರಿಯರು ಸಮ್ಮತಿಸಿದ ಹುಡುಗಿ ರಕ್ಷಿತಾ ಶರ್ವಾನಂದ್ ಎಂಗೇಜ್ ಆಗಿದ್ದರು. ಆದರೆ ಈಗ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಈ ನಿಶ್ಚಿತಾರ್ಥ ಮುರಿದು ಬಿದ್ದಿದೆ (Break Up) ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಅಜಯ್ ರಾವ್ ಚಿತ್ರಕ್ಕೆ ಕೆಜಿಎಫ್ ನಟಿ ಅರ್ಚನಾ ಜೋಯಿಸ್ ನಾಯಕಿ

ಈ ಸುದ್ದಿಯನ್ನ ಶರ್ವಾನಂದ್ ಟೀಂ ನಿರಾಕರಿಸಿದೆ. ಶರ್ವಾನಂದ್- ರಕ್ಷಿತಾ ನಡುವೆ ಸಂಬಂಧ ಚೆನ್ನಾಗಿದೆ. ಸದ್ಯ ನಟ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಷ್ಟೇ, ಲಂಡನ್‌ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಸದ್ಯ ಒಪ್ಪಿಕೊಂಡಿರುವ ಸಿನಿಮಾಗಳನ್ನ ಮುಗಿಸಿ, ಮದುವೆ ಆಗ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ನಿಶ್ಚಿತಾರ್ಥ ಮುರಿದಿರುವ ಸುದ್ದಿ ಬಗ್ಗೆ ನೇರವಾಗಿ ಶರ್ವಾನಂದ್- ರಕ್ಷಿತಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Share This Article