ಮರ್ಯಾದಾ ಹತ್ಯೆ: ಗರ್ಭಿಣಿ ಪತ್ನಿಯ ಎದುರೇ ಪತಿಯ ತಲೆಗೆ ಮಚ್ಚಿನಿಂದ ಏಟು

Public TV
2 Min Read

ಹೈದರಾಬಾದ್: ಗರ್ಭಿಣಿ ಪತ್ನಿ ಎದುರೇ ಪತಿಯನ್ನು ಕೊಲೆಗೈದಿರುವ ಘಟನೆ ತೆಲಂಗಾಣ ರಾಜ್ಯದ ನಾಲಗೊಂಡ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

23 ವರ್ಷದ ಪ್ರಣಯ್ ಕುಮಾರ್ ಕೊಲೆಯಾದ ವ್ಯಕ್ತಿ. ಪ್ರಣಯ್ ಕುಮಾರ್ 8 ತಿಂಗಳ ಹಿಂದೆ ಪ್ರೀತಿಸಿದ್ದ 21 ವರ್ಷದ ಅಮೃತ ಜೊತೆ ಮದುವೆ ಮಾಡಿಕೊಂಡಿದ್ದರು. ಇಬ್ಬರ ಜಾತಿ ಬೇರೆಯಾಗಿದ್ದರಿಂದ ಅಮೃತಾ ಮನೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದ್ರೂ ಯುವ ಜೋಡಿ ಮನೆಯವರ ವಿರೋಧದ ನಡುವೆಯೂ ಮದುವೆ ಆಗಿದ್ದರು. ಆದ್ರೆ ಶನಿವಾರ ಪ್ರಣಯ್ ಮತ್ತು ಅಮೃತಾ ಆಸ್ಪತ್ರೆ ಮುಂದೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮಚ್ಚಿನಿಂದ ಪ್ರಣಯ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಈ ಎಲ್ಲ ದೃಶ್ಯಾವಳಿಗಳು ಆಸ್ಪತ್ರೆ ಆವರಣದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಪತಿಯ ಕೊಲೆ ನೋಡಿದ ಅಮೃತ ಜ್ಞಾನ ತಪ್ಪಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಜ್ಞೆ ಬಂದ ಬಳಿಕ ಪೊಲೀಸರಿಗೆ ಹೇಳಿಕೆ ನೀಡಿರುವ ಅಮೃತ, ನಮ್ಮ ಮನೆಯಲ್ಲಿ ಅಂತರ್ಜಾತಿ ವಿವಾಹಕ್ಕೆ ವಿರೋಧ ವ್ಯಕ್ತವಾಗಿತ್ತು. ನಮ್ಮಿಬ್ಬರ ಮದುವೆಯಿಂದ ಕೋಪಗೊಂಡ ನನ್ನ ತಂದೆ ಹಾಗು ಚಿಕ್ಕಪ್ಪ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಮನೆಯ ವಿರೋಧದ ನಡುವೆ ನಾವು ಮದುವೆಯಾಗಿ ಚೆನ್ನಾಗಿ ಜೀವನ ನಡೆಸುತ್ತಿದ್ದೇವು. ನಾನು ಐದು ತಿಂಗಳ ಗರ್ಭಿಣಿ ಎಂದು ತಿಳಿದು ಪೋಷಕರು ಪತಿಯನ್ನು ಕೊಲೆ ಮಾಡಿಸಿ ಗರ್ಭಪಾತ ಮಾಡಿಸುವ ಪ್ಲಾನ್ ಮಾಡಿಕೊಂಡಿದ್ದರು ಎಂದು ಅಮೃತ ಪೊಲೀಸರಿಗೆ ತಿಳಿಸಿದ್ದಾರೆ.

ಅಮೃತ ತಂದೆ ಮಾರುತಿ ರಾವ್ ನಗರದ ಒರ್ವ ಪ್ರಭಾವಿ ಉದ್ಯಮಿಯಾಗಿದ್ದು ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾರುತಿ ರಾವ್ ಮತ್ತು ಚಿಕ್ಕಪ್ಪ ಶರವಣ ಎಂಬಾತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಣಯ್ ಮತ್ತು ಅಮೃತ ಹೈಸ್ಕೂಲ್ ನಲ್ಲಿಯೇ ಪ್ರೇಮಪಾಶಕ್ಕೆ ಸಿಲುಕಿದ್ದರು. ಮುಂದೆ ಕಾಲೇಜಿನಲ್ಲಿಯೂ ಇಬ್ಬರ ಪ್ರೇಮ ಮುಂದುವರಿದಿತ್ತು. ಆದ್ರೆ ಎರಡೂ ಕುಟುಂಬಗಳ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದವು. ಮದುವೆ ಬಳಿಕ ಪ್ರಣಯ್ ಮತ್ತು ಅಮೃತ ಎರಡೂ ಕುಟುಂಬಗಳಿಂದ ದೂರ ಬಂದು ಬೇರೆ ನೆಲೆಕಂಡುಕೊಂಡಿದ್ದರು. ಅಮೃತ ಪೋಷಕರು ಮಾತ್ರ ಮದುವೆ ನಂತರವೂ ದ್ವೇಷ ಸಾಧಿಸುತ್ತಿದ್ದರು ಎಂದು ವರದಿಯಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *