ತೆಲುಗು ನಟ ನಂದಮೂರಿ ತಾರಕರತ್ನ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್- ಶಸ್ತ್ರ ಚಿಕಿತ್ಸೆ ಯಶಸ್ವಿ

Public TV
1 Min Read

ಬೆಂಗಳೂರು: ತೆಲುಗು ಚಿತ್ರನಟ (Telugu Actor) ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತ (Heart Attack) ವಾಗಿದ್ದು. ಅವರನ್ನು ಆಂಧ್ರದ ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿನಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೊಸೂರು ರಸ್ತೆಯ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

ತಡರಾತ್ರಿ 12 ಗಂಟೆ ಸಂದರ್ಭದಲ್ಲಿ ಆಂಧ್ರದ ಕುಪ್ಪಂನಿಂದ ಅಂಬುಲೆನ್ಸ್ ಮೂಲಕ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬಳಿಕ ಯಶಸ್ವಿಯಾಗಿ ಆಂಜಿಯೋಗ್ರಾಮ್ (Angiogram) ಮಾಡಿ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿರುವುದಾಗಿ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ನಂದಮೂರಿ ತಾರಕ ರತ್ನಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ತಾರಕರತ್ನ ಅವರು ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಯುವ ಗಲಮ್ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಪ್ಪಂಗೆ ತೆರಳಿದ್ದರು. ಲೋಕೆಶ್ ಮಸೀದಿಯಿಂದ ಪ್ರಾರ್ಥನೆ ಸಲ್ಲಿಸಿ ಹೊರಬಂದಾಗ ಅಲ್ಲಿ ನೆರೆದಿದ್ದ ಟಿಡಿಪಿ ಕಾರ್ಯಕರ್ತರು ಏಕಾಏಕಿ ಲೋಕೇಶ್ ಕಡೆಗೆ ನುಗ್ಗಿದ್ದು, ಅಲ್ಲಿಯೇ ನಿಂತಿದ್ದ ತಾರಕರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ತಕ್ಷಣ ಅವರನ್ನು ಕುಪ್ಪಂನ ಸಮೀಪದ ಆಸ್ಪತ್ರೆಗೆ ದಾಖಲಿಸಿ ನಂತರ ಪಿಇಎಸ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಯಿತು. ಪಿಇಎಸ್ ವೈದ್ಯಕೀಯ ಕಾಲೇಜು ವೈದ್ಯರ ಸಲಹೆಯಂತೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಕೆಲ ಹೊತ್ತಲ್ಲಿ ಅಧಿಕೃತವಾಗಿ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *