ತೆಲುಗು ನಟ ಶ್ರೀವಿಷ್ಣು ಆರೋಗ್ಯ ಗಂಭೀರ : ಐಸಿಯುನಲ್ಲಿ ಚಿಕಿತ್ಸೆ

Public TV
1 Min Read

ತೆಲುಗಿನ ಹೆಸರಾಂತ ಯುವ ನಟ ಶ್ರೀವಿಷ್ಣು ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲ ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಸಾಮಾನ್ಯ ಜ್ವರ ಎಂದು ನೆಗ್ಲೆಟ್ ಮಾಡಿದ್ದರಿಂದ ಅವರು ಗಂಭೀರ ಸ್ಥಿತಿಗೆ ತಲುಪಿದ್ದಾರಂತೆ. ಸಾಮಾನ್ಯ ಜ್ವರದಿಂದ ಈಗವರಿಗೆ ಡೆಂಗ್ಯು ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಾಮಾನ್ಯ ಜ್ವರವೆಂದು ನಿರ್ಲಕ್ಷ್ಯ ಮಾಡಿದ್ದ ಶ್ರೀವಿಷ್ಣು ಜ್ವರ ಕಡಿಮೆ ಆಗದೇ ಇರುವ ಕಾರಣಕ್ಕಾಗಿ ನೆನ್ನೆಯಷ್ಟೇ ರಕ್ತಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಹಾಗಾಗಿ ಡೆಂಗ್ಯು ಖಾತ್ರಿಯಾಗಿದೆ. ಅವರಿಗೆ ಪ್ಲೇಟ್ ಲೇಟ್ಸ್ ಸಂಖ್ಯೆ ತುಂಬಾ ಕಡಿಮೆ ಆಗಿದ್ದು, ಆರೋಗ್ಯ ಸ್ಥಿತಿ ಸುಧಾರಿಸಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಪ್ರಾಣಕ್ಕೆ ಅಪಾಯವಿಲ್ಲವೆಂದು ವೈದ್ಯರು ಹೇಳಿದ್ದು ಆರೋಗ್ಯ ಸ್ಥಿತಿ ಮಾತ್ರ ಗಂಭೀರವಾಗಿದೆ ಎಂದು ತಿಳಿಸಿದ್ದಾರಂತೆ. ಇದನ್ನೂ ಓದಿ:ಚಿಕ್ಕಣ್ಣನ ಮದುವೆ ಮುಂದಿನ ವರ್ಷ ಫಿಕ್ಸ್: ಕುಟುಂಬದ ಒತ್ತಡಕ್ಕೆ ಕೊನೆಗೂ ಮಣಿದ ನಟ

ವಸಂತ ರಾಯಲು, ಅರ್ಜುನ ಪಾಲ್ಗುಣ, ರಾಜರಾಜ ಚೋರ, ಮೆಂಟ್ ಮದಿಲೋ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಶ್ರೀವಿಷ್ಣು, ಈಗಷ್ಟೇ ಅಲ್ಲೂರಿ ಸಿನಿಮಾದಲ್ಲಿ ನಟಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಈ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ತೆಲುಗು ಸಿನಿಮಾ ರಂಗದಲ್ಲು ಭರವಸೆಯ ಕಲಾವಿದ ಎಂದೇ ಖ್ಯಾತರಾಗಿರುವ ಇವರು, ಅಲ್ಲೂರಿ ಸಿನಿಮಾ ರಿಲೀಸ್ ಹೊತ್ತಿಗೆ ಆರೋಗ್ಯವನ್ನು ಹದಗೆಡಿಸಿಕೊಂಡಿದ್ದಾರೆ.

 

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *