ಹೈದರಾಬಾದ್: ಬಾಹುಬಲಿ ನಟ ರಾಣಾ ದಗ್ಗುಬಾಟಿ (Rana Daggubati) ಹಾಗೂ ತಂದೆ ಸುರೇಶ್ ಬಾಬು (Suresh Babu) ವಿರುದ್ಧ ಭೂಕಬಳಿಕೆ ಆರೋಪದ ಅಡಿಯಲ್ಲಿ ಪ್ರಕರಣ (FIR) ದಾಖಲಾಗಿದೆ.
ಹೈದರಾಬಾದ್ನ ಫಿಲ್ಮ್ ನಗರದಲ್ಲಿರುವ (Hyderabad Film City) ಜಮೀನು ಆಸ್ತಿ (Property) ವಿವಾದಕ್ಕೆ ಸಂಬಂಧಿಸಿದಂತೆ ಉದ್ಯಮಿ ಪ್ರಮೋದ್ ಕುಮಾರ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್ಡೇಟ್
ತೆಲುಗು ನಟ (Telugu Film Actor) ರಾಣಾ ದಗ್ಗುಬಾಟಿ ಮತ್ತು ಅವರ ತಂದೆ ದಗ್ಗುಬಾಟಿ ಸುರೇಶ್ ಬಾಬು ವಿರುದ್ಧ ಜಾಗವೊಂದರ ವಿಚಾರಕ್ಕೆ ಜಗಳ ನಡೆದಿತ್ತು. ಉದ್ಯಮಿ ಪ್ರಮೋದ್ ಕುಮಾರ್ ರಾಣಾ ದಗ್ಗುಬಾಟಿ ಮತ್ತು ಕೆಲವರ ವಿರುದ್ಧ ದೂರು ನೀಡಿದ್ದರು. ಆದರೆ ಪೊಲೀಸರು (Police) ಕೇಸ್ ದಾಖಲಿಸದ ಕಾರಣ ಪ್ರಮೋದ್ ಕೋರ್ಟ್ ಮೆಟ್ಟಿಲೇರಿ ನೋಟಿಸ್ ತಂದು ದೂರು ನೀಡಿದ್ದರು. ರಾಣಾ ಮತ್ತು ಅವರ ತಂದೆ ಇಬ್ಬರೂ ಸ್ಥಳ ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ರಾಣಾ ದಗ್ಗುಬಾಟಿ, ತಂದೆ ಸುರೇಶ್ ಬಾಬು ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದೆ. ನಾಂಪಲ್ಲಿ ನ್ಯಾಯಾಲಯ ಸಮನ್ಸ್ ಕೂಡ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೂರುದಾರ ಉದ್ಯಮಿಯು ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: `ಕಾಂತಾರ’ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಗೆಲ್ಲಲು ಅಸಲಿ ಕಾರಣ ಬಿಚ್ಚಿಟ್ಟ ರಿಷಬ್ ಶೆಟ್ಟಿ
ರಾಣಾ ದಗ್ಗುಬಾಟಿ ವಿರುದ್ಧ ಕ್ರಿಮಿನಲ್ ಆರೋಪ ಇದೇ ಮೊದಲೇನಲ್ಲ. ಈ ಹಿಂದೆ 2017ರ ಔಷಧ ಹಗರಣಕ್ಕೆ ಸಂಬಂಧಿಸಿದಂತೆ 2021ರಲ್ಲಿ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k