ಬೀದರ್‌ನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ತಾಯಿ, ಮಗಳ ದುರಂತ ಅಂತ್ಯ

Public TV
1 Min Read

ಬೀದರ್: ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basava Kalyana) ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ.

ಬೋಸ್ಲಾ ಗ್ರಾಮದ ಮೂಲದವರಾದ ತಾಯಿ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಮೃತರು.ಇದನ್ನೂ ಓದಿ:  1+ 1 = 3 ಎಂದರು ನಟಿ ಪರಿಣಿತಿ ಚೋಪ್ರಾ

ಮಹಾರಾಷ್ಟ್ರಕ್ಕೆ ಹೋಗಿದ್ದ ಇಬ್ಬರು ಬೈಕ್ ಮೇಲೆ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಹಾಲಿನ ಗೂಡ್ಸ್ ಗಾಡಿ ಟಿವಿಎಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಅಂಗವಿಕಲರ ಬಗ್ಗೆ ತಮಾಷೆ – ಸ್ಟ್ಯಾಂಡ್ ಅಪ್ ಕಾಮಿಡಿಯನ್‌ಗಳಿಗೆ ಸುಪ್ರೀಂ ತರಾಟೆ

Share This Article