ಕಾರವಾರ | ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು

Public TV
1 Min Read

ಕಾರವಾರ: ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ.

ಆರ್ ವೆಂಕಟೇಶ್, ಪತ್ನಿ ಚೈತ್ರಾ ಹಾಗೂ 4 ವರ್ಷದ ಮಗು ಶ್ರೀಹಾನ್ ಮೃತ ದುರ್ದೈವಿಗಳು. ಇದನ್ನೂ ಓದಿ: ಕ್ರಿಕೆಟ್ ಆಡುವಾಗ ಅಲ್ ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ರ‍್ಯಾಗಿಂಗ್ ಆರೋಪ

ಓವರಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಇದನ್ನೂ ಓದಿ: ಹೊಸಕೋಟೆಯಿಂದ ಕುಂಭಮೇಳಕ್ಕೆ ಹೋಗ್ತಿದ್ದಾಗ ಅಪಘಾತ – ಮಹಿಳೆ ಸಾವು

ಕುಟುಂಬಸ್ಥರು ಕೊಪ್ಪಳದಿಂದ ಅಂಕೋಲಾಕ್ಕೆ ಕಡೆಗೆ ಪ್ರವಾಸಕ್ಕೆ ಹೊರಟ್ಟಿದ್ದರು. ಮೃತ ವೆಂಕಟೇಶ್ ತಮ್ಮ ಶ್ರೀಕಾಂತ ರೆಡ್ಡಿ ಕಾರು ಚಲಾಯಿಸುತ್ತಿದ್ದರು. ಚಾಲಕ ಶ್ರೀಕಾಂತ್ ರೆಡ್ಡಿಯ ಎರಡು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಎರಡು ಅಂತಸ್ತಿನ ಮನೆ ಕುಸಿತ

Share This Article