ಗೃಹ ಸಚಿವರ ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ – ಮುತಾಲಿಕ್

Public TV
1 Min Read

ಬೆಂಗಳೂರು: ಶಿವಮೊಗ್ಗದ (Shivamogga) ತೀರ್ಥಹಳ್ಳಿಯಲ್ಲಿರುವ ಗೃಹ ಸಚಿವರ (Home Minister) ಮನೆಯ ಸುತ್ತಮುತ್ತಲೇ ಉಗ್ರರು ಅಡಗಿದ್ದಾರೆ ಎಂದು ಶ್ರೀರಾಮಸೇನೆ (Sri Ram Sena) ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು (Benagaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ (PFI) ಸಂಘಟನೆ ಬ್ಯಾನ್ ಮಾಡಿದ್ರೂ, ಮಾನಸಿಕತೆ ಬ್ಯಾನ್ ಆಗಿಲ್ಲ. ಕರಾವಳಿ ಭಾಗದಲ್ಲಿ ಉಗ್ರರ ಕೃತ್ಯ ಹೆಚ್ಚಾಗುತ್ತಿದೆ. ಅಲ್ಲಿಗೆ ವಿಶೇಷ ಪಡೆಯ ಅಗತ್ಯ ಕರಾವಳಿ ಭಾಗಕ್ಕೆ ಅಗತ್ಯವಿದೆ. ಪಿಎಫ್‌ಐ ಮಾತ್ರವಲ್ಲ ಎಸ್‌ಡಿಪಿಐ (SDPI) ಕೂಡ ಬ್ಯಾನ್ ಆಗ್ಬೇಕು. ಇವರು ಬ್ಯಾನ್ ಆದ್ರೂ ಬಾಲ ಬಿಚ್ಚೋದು ಕಡಿಮೆಯಾಗಿಲ್ಲ. ಹೀಗಾಗಿ ಪೊಲೀಸರು (Police) ಇದನ್ನು ನಿರ್ಲಕ್ಷ್ಯ ಮಾಡಬಾರದು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇಂಡೋನೆಷ್ಯಾದಲ್ಲಿ ಭೂಕಂಪ 40ಕ್ಕೂ ಅಧಿಕ ಸಾವು – 300ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಗಳೂರಿನ ಈ ಪ್ರಕರಣ ಭಟ್ಕಳಕ್ಕೂ ಲಿಂಕ್ ಇದೆ. ತೀರ್ಥಹಳ್ಳಿ ಗೃಹ ಸಚಿವರ ಮನೆ ಸುತ್ತಮುತ್ತಲೇ ಉಗ್ರರು ಅಡಗಿ ಕುಳಿತಿದ್ದಾರೆ. ಗೃಹ ಮಂತ್ರಿಗಳ ತವರೇ ಉಗ್ರರ ಸೆಂಟರ್ ಆಗಿದೆ. ಈ ಹಿಂದೆ ಕಾಂಗ್ರೆಸ್ (Congress) ಅವಧಿಯಲ್ಲೂ ಹಿಂದೂ ಹುಡುಗಿಯ ಅತ್ಯಾಚಾರ, ಹತ್ಯೆಯಾಗಿದೆ. ಆ ಪ್ರಕರಣವನ್ನೂ ರೀ ಓಪನ್ ಮಾಡಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ – ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ

ಪಿಎಫ್‌ಐ (PFI) ನಿಷೇಧವಾದ್ರೂ ಅವ್ರ ಕುಕೃತ್ಯಕ್ಕೆ ಬ್ರೇಕ್ ಬಿದ್ದಿಲ್ಲ. ಮಂಗಳೂರಿನ ಬಾಂಬ್ ಬ್ಲಾಸ್ಟ್ (Bomb Blast) ಸಿಎಂ ಕಾರ್ಯಕ್ರಮ ಅಥವಾ ಆರ್‌ಎಸ್‌ಎಸ್ ಮಕ್ಕಳ ಕಾರ್ಯಕ್ರಮ ಗುರಿಯಾಗಿತ್ತೇ ಅನ್ನೋದನ್ನ ತನಿಖೆ ನಡೆಸಬೇಕು. ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *