ನಿರ್ಮಾಪಕ ರವೀಂದರ್ ಬಲೆಗೆ ನಟಿ ಮಹಾಲಕ್ಷ್ಮೀ ಬಿದ್ದಿದ್ದು ಅದೊಂದು ಸಂದೇಶದಿಂದ

Public TV
2 Min Read

ಪ್ರೀತಿ ಕುರುಡು ಅಂತಾರೆ. ನಿರ್ಮಾಪಕ ರವೀಂದರ್ ಮತ್ತು ನಟಿ ಮಹಾಲಕ್ಷ್ಮೀ ಬದುಕಿನಲ್ಲಿ ಅಕ್ಷರಶಃ ಅದು ನಿಜವಾಗಿದೆ. ವಯಸ್ಸಿನ ಅಂತರ, ಬ್ಯೂಟಿ, ತೂಕ ಎಲ್ಲವನ್ನೂ ಮೀರಿ ಇಬ್ಬರ ಬದುಕಿನಲ್ಲಿ ಪ್ರೇಮ್ ಕಹಾನಿ ಗೆದ್ದಿದೆ. ಹಾಗಾಗಿಯೇ ಇಬ್ಬರೂ ಮೊನ್ನೆಯಷ್ಟೇ ಸಪ್ತಪದಿ ತುಳಿದು ಸತಿಪತಿಯಾಗಿದ್ದಾರೆ. ಆದರೆ, ಕೆಲವರಂತೂ ಈ ಮದುವೆಯ ಬಗ್ಗೆ ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದು, ಇದೊಂದು ಮಿಸ್ ಮ್ಯಾಚ್ ಮದುವೆ ಎಂದು ತಮಗೆ ತಾವೇ ಘೋಷಿಸುತ್ತಿದ್ದಾರೆ. ಈ ಬಗ್ಗೆ ಮಹಾಲಕ್ಷ್ಮಿಯಾಗಲಿ, ರವೀಂದರ್ ಆಗಲಿ ತಲೆ ಕೆಡಿಸಿಕೊಂಡಿಲ್ಲ.

ರತಿಯಂತಿರುವ ಮಹಾಲಕ್ಷ್ಮೀ, ಸಮ ತೂಗುವ ರವೀಂದರ್ ಜೊತೆ ಮದುವೆ ಆಗಿದ್ದು ಹೇಗೆ? ಇಬ್ಬರೂ ಒಪ್ಪಿಗೆ ಸೂಚಿಸಿದ್ದು ಯಾವಾಗ? ಯಾರು ಮೊದಲು ಪ್ರಪೋಸ್ ಮಾಡಿದ್ದು ಹೀಗೆ ಹಲವಾರು ಪ್ರಶ್ನೆಗಳು ಜನರಲ್ಲಿ ಮೂಡಿವೆ. ಈ ಎಲ್ಲದಕ್ಕೂ ನಿನ್ನೆಯಷ್ಟೇ ಮಹಾಲಕ್ಷ್ಮಿ ಉತ್ತರ ಕೊಟ್ಟಿದ್ದಾರೆ. ನನ್ನ ಹೃದಯ ಕದ್ದಿದ್ದೀಯಾ, ಜೋಪಾನವಾಗಿಟ್ಟುಕೊ ಎಂದು ಹೇಳುವ ಮೂಲಕ ಮೊದಲು ಪ್ರಪೋಸ್ ಮಾಡಿದ್ದು ರವೀಂದರ್ ಎನ್ನುವುದನ್ನು ಗುಟ್ಟು ರಟ್ಟು ಮಾಡಿದ್ದಾರೆ. ಆದರೆ, ಈ ಲವ್ ಶುರುವಾಗಿದ್ದನ್ನು ಮಾತ್ರ ಅವರು ಮುಚ್ಚಿಟ್ಟಿದ್ದಾರೆ. ಇದನ್ನೂ ಓದಿ:ಪ್ರೀ ವೆಡ್ಡಿಂಗ್ ಫೋಟೋಶೂಟ್‌ನಲ್ಲಿ ಮಿಂಚಿದ `ಕಮಲಿ’ ಖ್ಯಾತಿಯ ಗೇಬ್ರಿಯೆಲಾ- ಸುಹಾಸ್

ಈ ಜೋಡಿಯ ಲವ್ ಕಹಾನಿ ಶುರುವಾಗಿದ್ದೇ ಒಂದು ಇಂಟ್ರಸ್ಟಿಂಗ್ ಸ್ಟೋರಿ. ಮಹಾಲಕ್ಷ್ಮಿ ಕೇವಲ ನಿರೂಪಕಿ ಮಾತ್ರವಲ್ಲ, ಕಿರುತೆರೆ ನಟಿ ಕೂಡ. ರವೀಂದರ್ ಕೂಡ ಕಿರುತೆರೆಯ ಲೋಕದಲ್ಲಿ ಅನೇಕ ಧಾರಾವಾಹಿಗಳನ್ನು ನಿರ್ಮಾಣ ಮಾಡಿದ್ದಾರೆ. ರವೀಂದರ್ ನಿರ್ಮಾಣ ಮಾಡಿದ ಧಾರಾವಾಹಿಯಲ್ಲಿ ಮಹಾಲಕ್ಷ್ಮಿ ನಟಿಸಿದ್ದಾರೆ. ಮೊದಲ ಪ್ರೇಮ ಶುರುವಾಗಿದ್ದೇ ಈ ಧಾರಾವಾಹಿಯ ಮೂಲಕ. ಮೊದಲು ನಟಿಯಾಗಿ ಪರಿಚಯ. ಆಮೇಲೆ ಸ್ನೇಹ. ಸ್ನೇಹ ವಿಶ್ವಾಸವಾಗಿ, ಅದು ಸಂದೇಶವಾಗಿ ಹರಿದು ಬಂದು ಇಬ್ಬರನ್ನೂ ಒಂದಾಗಿಸಿದೆ.

ಅದೊಂದು ರಾತ್ರಿ ಮಹಾಲಕ್ಷ್ಮಿ ಮೊಬೈಲ್ ಗೆ ಬಂದ ಸಂದೇಶ ಸ್ವತಃ ಅವರನ್ನೇ ಅಚ್ಚರಿಗೆ ನೂಕಿದೆ. ಆ ಕಡೆಯಿಂದ ಸಂದೇಶ ಕಳುಹಿಸಿದ್ದು ರವೀಂದರ್. ನೀವು ನನಗೆ ಇಷ್ಟವಾಗಿದ್ದೀರಿ. ಮದುವೆ ಯಾಕೆ ಆಗಬಾರದು ಎನ್ನುವ ರವೀಂದರ್ ಕೋರಿಕೆಯನ್ನು ಕೆಲವು ದಿನಗಳ ನಂತರ ಮಹಾಲಕ್ಷ್ಮಿ ಒಪ್ಪಿಕೊಂಡಿದ್ದಾರೆ. ಅಲ್ಲಿಂದ ಶುರುವಾದ ಪ್ರೇಮಕಾವ್ಯ ಇಂದು ದಾಂಪತ್ಯಗೀತೆಯಾಗಿ ಅವರ ಮುಂದಿದೆ. ಮಹಾಲಕ್ಷ್ಮಿ ಮತ್ತು ರವೀಂದರ್ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *