ಬೂಸ್ಟರ್‌ ಡೋಸ್ ಪಡೆದ ರಾಜ್ಯಪಾಲ – ಲಸಿಕೆ ಪಡೆಯಲು ಜನತೆಗೆ ಕರೆ

Public TV
1 Min Read

ಬೆಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್‌ ಲಸಿಕೆಯ ಬೂಸ್ಟರ್‌ ಡೋಸ್‌ ಪಡೆದುಕೊಂಡರು.

ನಂತರ ಅವರು ನಾಡಿನ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಮಾತನಾಡಿದ ರಾಜ್ಯಪಾಲರು, ಕೊರೊನಾ ಮಹಾಮಾರಿಯಿಂದ ಮುಕ್ತಿಯಾಗಲು ಲಸಿಕೆ ಅವಶ್ಯಕತೆ ಇದೆ. ಲಸಿಕೆ ಪಡೆಯೋದು ಅವಶ್ಯವಾಗಿದೆ. ರಾಜ್ಯದ ಜನ ಲಸಿಕೆ ಪಡೆಯಬೇಕು. ಕೊರೊನಾದಿಂದ‌ ಮುಕ್ತವಾಗಲು ಲಸಿಕೆ ಮುಖ್ಯ ಎಂದು ಸಲಹೆ ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಲಾಕ್‌ಡೌನ್‌ ಇಲ್ಲವೇ ಇಲ್ಲ: ಸಚಿವ ಸುಧಾಕರ್‌ ಸ್ಪಷ್ಟನೆ

ದೆಹಲಿಯಲ್ಲಿ ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದಿದ್ದೇನೆ. ಇಂದು ಬೂಸ್ಡರ್ ಡೋಸ್ ಪಡೆದಿದ್ದೇನೆ. ಪ್ರಮಾಣ ಪತ್ರವನ್ನು ನನಗೆ ನೀಡಿದ್ದಾರೆ. ಇಡೀ ದೇಶದಲ್ಲಿ ‌ಲಸಿಕೆ ಅಭಿಯಾನ ನಡೆಯುತ್ತಿದೆ. ಲಸಿಕಾ ಅಭಿಯಾನದಲ್ಲಿ ಕರ್ನಾಟಕ ಮುಂದಿದೆ. ಈ ಕಾರ್ಯಕ್ಕೆ ಸಿಎಂ ಹಾಗೂ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರು ಲಸಿಕೆ ಪಡೆಯಬೇಕು. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು ಹೇಳಿದರು.

ರಾಜ್ಯದಲ್ಲಿ 4.89 ಕೋಟಿ ಜನರು ಮೊದಲ ಡೋಸ್, 3.98 ಕೋಟಿ ಜನರು ಎರಡನೇ ಡೋಸ್ ಪಡೆದಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.81.5 ಮಂದಿಗೆ ಎರಡೂ ಡೋಸ್ ನೀಡಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5T ಸೂತ್ರ: ಪ್ರಧಾನಿ ಮೆಚ್ಚುಗೆ

Share This Article
Leave a Comment

Leave a Reply

Your email address will not be published. Required fields are marked *