ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿಯಿಟ್ಟ ವ್ಯಕ್ತಿಯ ಬಂಧನ

Public TV
0 Min Read

ಚಾಮರಾಜನಗರ: ಜಿಲ್ಲೆಯ ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಚಾಮರಾಜನಗರ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೋಹನ್ ಕುಮಾರ್ ರಥಕ್ಕೆ ಬೆಂಕಿ ಹಚ್ಚಿದವನು. ಮೋಹನ್ ಕುಮಾರ್ ನಗರ ಸಭೆ ಮಾಜಿ ಅಧ್ಯಕ್ಷೆಯೊಬ್ಬರ ಸಂಬಂಧಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈತ ಕಳೆದ ಭಾನುವಾರ ತಡರಾತ್ರಿ ರಥಕ್ಕೆ ಬೆಂಕಿ ಹಚ್ಚಿ ಅಲ್ಲಿಂದ ಕಾಲ್ಕಿತ್ತಿದ್ದನು.

ಪೊಲೀಸರು ಮೋಹನ್ ಕುಮಾರ್‍ನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇಂದು ಮೋಹನ್ ಕುಮಾರನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

 

 

Share This Article
Leave a Comment

Leave a Reply

Your email address will not be published. Required fields are marked *