ಸರ್ಕಾರ ಆರ್ಡರ್ ನೀಡದಿದ್ರೆ ಕೋವಿಶೀಲ್ಡ್ ಉತ್ಪಾದನೆ ಶೇ.50ರಷ್ಟು ಕಡಿತಕ್ಕೆ ನಿರ್ಧಾರ: ಆದಾರ್ ಪೂನಾವಾಲಾ

Public TV
1 Min Read

ನವದೆಹಲಿ: ಇದುವರೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಆದೇಶ ಬರದಿದ್ದರಿಂದ ಮುಂದಿನ ವಾರದಿಂದ ಕೋವಿಶೀಲ್ಡ್ ಲಸಿಕೆ ಉತ್ಪಾದನೆಯನ್ನು ಶೇ.50 ರಷ್ಟು ಕಡಿತಗೊಳಿಸಲು ನಿರ್ಧರಿಸಿರುವುದಾಗಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಅದಾರ್ ಪೂನಾವಾಲಾ ಹೇಳಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹೆಚ್ಚುವರಿ ಆರ್ಡರ್ ನೀಡದಿದ್ದರೆ ಮುಂದಿನ ವಾರದಿಂದಲೇ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯು ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಪ್ರಮಾಣವನ್ನು ಕಡಿತಗೊಳಿಸುತ್ತದೆ. ಇದನ್ನೂ ಓದಿ: 3ನೇ ಅಲೆ ತೀವ್ರತೆ ಹೆಚ್ಚಾಗಬಹುದು – ಐಎಂಎ ವಾರ್ನಿಂಗ್

ರಾಷ್ಟ್ರಕ್ಕೆ ದೊಡ್ಡ ಪ್ರಮಾಣದ ಕೋವಿಡ್ ಲಸಿಕೆ ಅಗತ್ಯವಿದ್ದರೆ ಹೆಚ್ಚುವರಿ ಲಸಿಕೆ ಉತ್ಪಾದನಾ ಸಾಮರ್ಥ್ಯ ಉಳಿಸಿಕೊಳ್ಳಲು ಬಯಸುತ್ತೇನೆ. ಆದರೆ ಇದುವರೆಗೆ ಈ ಬಗ್ಗೆ ಯಾವುದೇ ಆದೇಶವಿಲ್ಲದ ಹಿನ್ನೆಲೆಯಲ್ಲಿ ಲಸಿಕೆ ಉತ್ಪಾದನೆಯನ್ನು ಕಡಿತಗೊಳಿಸಲಿದ್ದೇವೆ. 20-30 ಮಿಲಿಯನ್ ಡೋಸ್ ಸ್ಪುಟ್ನಿಕ್ ಲೈಟ್ ಲಸಿಕೆಯನ್ನು ಸಂಗ್ರಹಿಸುವುದಾಗಿ ಕೇಂದ್ರ ಹೇಳಿದೆ. ನಾವು ಪರವಾನಗಿ ಪಡೆದ ತಕ್ಷಣ, ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ಉತ್ಪಾದಿಸಬಹುದು ಎಂದು ಪೂನಾವಾಲಾ ಹೇಳಿದ್ದಾರೆ. ಇದನ್ನೂ ಓದಿ: ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಕ್ರಮ: ಬೊಮ್ಮಾಯಿ

ಜಗತ್ತಿನಾದ್ಯಂತ ಕೊರೊನಾ ವೈರಸ್ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಇರುವ ಲಸಿಕೆಗಳ ಪರಿಣಾಮಕಾರಿತ್ವದ ಬಗ್ಗೆ ಮಾತನಾಡಿರುವ ಪೂನಾವಾಲಾ, ಹೊಸ ರೂಪಾಂತರದ ಮೇಲೆ ಲಸಿಕೆಗಳು ಅಷ್ಟರಮಟ್ಟಿಗೆ ಪರಿಣಾಮಕಾರಿಯಾಗಿಲ್ಲ ಎಂದು ಹೇಳಕ್ಕಾಗಲ್ಲ. ಈಗ ಇರುವ ಲಸಿಕೆಗಳು ರೂಪಾಂತರದ ವಿರುದ್ಧ ಕೆಲಸ ಮಾಡುವುದಿಲ್ಲ ಎಂದು ಹೇಳಲು ಯಾವುದೇ ಸಾಕ್ಷಿಗಳಿಲ್ಲ. ಡಬಲ್ ವ್ಯಾಕ್ಸಿನೇಷನ್ ಪಡೆದವರು ಯೋಗ್ಯ ಮಟ್ಟದಲ್ಲಿ ಸುರಕ್ಷಿತವಾಗಿಲ್ಲ ಎಂದು ನಂಬಲು ಯಾವುದೇ ಕಾರಣವಿಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *