ನವದೆಹಲಿ: ದೆಹಲಿಯ ಸ್ವಾಮಿ ಚೈತನ್ಯಾನಂದ ಸರಸ್ವತಿಯ ಒಂದೊಂದೇ ಕರ್ಮಕಾಂಡಗಳು ಬಯಲಾಗುತ್ತಿದ್ದು, ಮಾಜಿ ವಿದ್ಯಾರ್ಥಿ ಹಾಗೂ ಐಎಎಫ್ನ ಗ್ರೂಪ್ ಕ್ಯಾಪ್ಟನ್ ಕಳಿಸಿದ ಮೇಲ್ನಿಂದ ಕಾಮಪುರಾಣವೇ ಬಹಿರಂಗಗೊಂಡಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪದಡಿ `ದೆಹಲಿ ಬಾಬಾ’ ಎಂದೇ ಖ್ಯಾತಿ ಪಡೆದಿದ್ದ ಚೈತನ್ಯಾನಂದ ಸ್ವಾಮೀಜಿ ಮತ್ತಷ್ಟು ಅವಾಂತರು ಬೆಳಕಿಗೆ ಬರ್ತಿವೆ. ಈ ಸ್ವಘೋಷಿತ ದೇವಮಾನವನ ರಾಸಲೀಲೆ ಬಗ್ಗೆ ಮಾಜಿ ವಿದ್ಯಾರ್ಥಿ ಹಾಗೂ ಐಎಎಫ್ನ ಗ್ರೂಪ್ ಕ್ಯಾಪ್ಟನ್ವೊಬ್ಬರು ಕೂಡ ಕೆಲ ದಿನಗಳ ಹಿಂದಷ್ಟೇ ಇ-ಮೇಲ್ ಕಳಿಸಿದ್ದರು. ಇದರಿಂದಾಗಿಯೇ ಕಾಮಿಸ್ವಾಮಿಯ ಬಣ್ಣ ಬಯಲಿಗೆ ಬಂದಿದೆ ಅಂತಲೂ ತಿಳಿದು ಬಂದಿದೆ.ಇದನ್ನೂ ಓದಿ: ನೀನು ಸುಂದರವಾಗಿ ಕಾಣ್ತೀಯಾ, ಬೇಬಿ I Love You: ಕಾಲೇಜು ವಿದ್ಯಾರ್ಥಿನಿಯರ ಬೆನ್ನುಬಿದ್ದಿದ್ದ ಸ್ವಾಮೀಜಿ
ಇನ್ನೂ ದೌರ್ಜನ್ಯ ಪ್ರಕರಣದಲ್ಲಿ ಸಂಸ್ಥೆಯ ಡೀನ್ ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಶಾಮೀಲಾಗಿದ್ದಾರೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಧಿಕಾರಿಗಳ ಪ್ರಕಾರ, ಚೈತನ್ಯಾನಂದ ತನ್ನ ನೆಲಮಹಡಿಯ ಕಚೇರಿಯನ್ನು ಲೈಂಗಿಕ ಕಿರುಕುಳದ ತಾಣವನ್ನಾಗಿ ಪರಿವರ್ತಿಸಿದ್ದ. ಸಂತ್ರಸ್ತರು ಮಾತನಾಡದಂತೆ ಅಥವಾ ಸಂಸ್ಥೆಯಿಂದ ಹೊರಹೋಗದಂತೆ ತಡೆಯಲು ಅವರ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಪಿಎಚ್ಡಿ, ಎಂಬಿಎ ಮಾಡಿರೋದಾಗಿಯೂ ಸ್ವಾಮೀಜಿ ಹೇಳಿಕೊಂಡಿದ್ದರು.
ಏನಿದು ಪ್ರಕರಣ?
62 ವರ್ಷದ ಸ್ವಾಮೀಜಿಯು ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಲೈಂಗಿಕ ಕಿರುಕುಳ ಆರೋಪದ ಮೇಲೆ ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಇದನ್ನೂ ಓದಿ: 17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR
ಎಫ್ಐಆರ್ನಲ್ಲಿ ಕಿರುಕುಳ ನೀಡಿರುವ ಬಗ್ಗೆ ಯುವತಿಯರ ಹೇಳಿಕೆ ಉಲ್ಲೇಖವಾಗಿದೆ. EWS ಕೋಟಾದಡಿ ಬಂದ ವಿದ್ಯಾರ್ಥಿನಿಯರನ್ನು ಸ್ವಾಮೀಜಿ ಟಾರ್ಗೆಟ್ ಮಾಡುತ್ತಿದ್ದರು. ಸ್ಕಾಲರ್ಶಿಪ್ ಕೊಡಿಸುವ, ಅಂಕಗಳನ್ನು ಕಟ್ ಮಾಡುವ, ಮಾರ್ಕ್ಸ್ ಕಾರ್ಡ್ ಕೊಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ.
ವಿದೇಶ ಪ್ರವಾಸದ ಆಫರ್ ನೀಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ತಡರಾತ್ರಿ ಮೆಸೇಜ್ ಮಾಡಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುತ್ತಿದ್ದರು. ಕಾಲೇಜಿನ ಡೀನ್ ಕೂಡ ಸ್ವಾಮೀಜಿಗೆ ಸಾಥ್ ನೀಡುತ್ತಿದ್ದರು. ಡೀನ್ಗೆ ದೂರು ನೀಡಲು ಬಂದರೆ, ಮೆಸೇಜ್ಗೆ ಪ್ರತಿಕ್ರಿಯೆ ನೀಡುವಂತೆ ಸಲಹೆ ನೀಡುತ್ತಿದ್ದರೆಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.ಇದನ್ನೂ ಓದಿ: ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ