ವೈಟ್ ಬೋರ್ಡ್ ಕಾರು ಇರುವ ಪಡಿತರ ಚೀಟಿ ರದ್ದು ಪ್ರಕ್ರಿಯೆ ಶುರು

Public TV
2 Min Read

ಬೆಂಗಳೂರು: ವೈಟ್ ಬೋರ್ಡ್ ಕಾರು (White Board Car) ಇರುವ ಪಡಿತರ ಚೀಟಿಯ ರದ್ದು ಪ್ರಕ್ರಿಯೆ ಸರ್ಕಾರ ಶುರು ಮಾಡಿದೆ. ಆಹಾರ ಇಲಾಖೆಯಿಂದ ನಾಲ್ಕು ಚಕ್ರ ವಾಹನಗಳ ಸರ್ವೆ ನಡೆಯುತ್ತಿದೆ. ಮತ್ತೊಂದು ಕಡೆ ಕೆಲವರಿಗೆ ಅನ್ನಭಾಗ್ಯ ಹಣ ತಲುಪಿಲ್ಲ.

ಅನ್ನಭಾಗ್ಯ ಯೋಜನೆ (AnnaBhagya Scheme) ಜಾರಿಯಾಗಿ 5 ಕೆ.ಜಿ ಉಚಿತ ಅಕ್ಕಿ ವಿತರಣೆ ಮತ್ತು 5 ಕೆ.ಜಿಗೆ ಅಕ್ಕಿಗೆ 170 ರೂಪಾಯಿ ಹಣ ಪಡಿತರ ಚೀಟಿದಾರರಿಗೆ ತಲುಪಿದೆ. ಈ ಮಧ್ಯೆ ವೈಟ್‍ಬೋರ್ಡ್ ಕಾರು ಇರುವ ಕಾರ್ಡ್‍ಗಳನ್ನ ರದ್ದು ಮಾಡಲು ಮುಂದಾಗಿದೆ. ಈ ಪದ್ಧತಿ ಮೊದಲಿನಿಂದ ಇದೆ ಅಂತಾ ಹೇಳಲಾಗ್ತಿದ್ದು, ಈ ವರ್ಷ ವೈಟ್ ಬೋರ್ಡ್ ಕಾರು ಹೊಂದಿರುವ ನಾಲ್ಕು ಚಕ್ರದ ವಾಹನ ಸರ್ವೆಗೆ ಆಹಾರ ಇಲಾಖೆ ಮುಂದಾಗಿದೆ. ಈ ಬಗ್ಗೆ ಸರ್ವೆ ನಡೆಸಲು ಮುಂದಾಗಿದ್ದು, ಮುಂದಿನ ತಿಂಗಳ ಒಳಗಡೆ ಪ್ರಕ್ರಿಯೆ ಶುರು ಮಾಡಲಿದ್ದಾರಂತೆ. ಆರ್‍ಟಿಓಯಿಂದ ನಾಲ್ಕು ಚಕ್ರ ವಾಹನ ಹೊಂದಿರುವವರ ಮಾಹಿತಿ ಬರಲಿದೆ. ಜೊತೆಗೆ ಆದಾಯ ತೆರಿಗೆ ಇಲಾಖೆಯಿಂದ ಆದಾಯ ತೆರಿಗೆ ಪಾವತಿ ಮಾಡ್ತಾ ಇರುವವರ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ ಆರಂಭ ಮಾಡುತ್ತೇವೆ ಅಂತಾ ಇದ್ದಾರೆ.

ಅನ್ನಭಾಗ್ಯ ಹಣ ಎಲ್ಲಾ ಜಿಲ್ಲೆಯ ಪಡಿತರ ಚೀಟಿದಾರರಿಗೆ (Ration Card) ತಲುಪಿದ್ದು, ಅದರಲ್ಲಿ 10 ಲಕ್ಷಕ್ಕೂ ಹೆಚ್ಚು ಪಡಿತರದಾರರಿಗೆ ತಲುಪಿಲ್ಲ ಅಂತಾ ಹೇಳಲಾಗ್ತಿದೆ. ಕಾರಣ ಅಕೌಂಟ್ ನಂಬರ್ ಸರಿ ಇಲ್ಲದೇ ಇರುವಂತಹದ್ದು, ಆಧಾರ್ ಗೆ ಅಕೌಂಟ್ ಲಿಂಕ್ ಆಗಿಲ್ಲ ಎನ್ನುವಂತಹದ್ದು, ಈ ರೀತಿಯ ಕಾರಣದಿಂದ ಅಮೌಂಟ್ ತಲುಪಿಲ್ಲವಂತೆ ಸಮಸ್ಯೆ ಕ್ಲಿಯರ್ ಆದ ಬಳಿಕ ಅಮೌಂಟ್ ಹಾಕುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ರೆ ರೌಡಿಶೀಟ್ ಓಪನ್ – ಪೊಲೀಸ್ ಕಮಿಷನರ್ ಎಚ್ಚರಿಕೆ

ವೈಟ್ ಬೋರ್ಡ್ ಕಾರು ಇರುವ ಪಡಿತರ ಚೀಟಿ ರದ್ದಾಗಲಿದ್ದು, ಆಹಾರ ಇಲಾಖೆ ಮಾಹಿತಿ ಸಂಗ್ರಹಕ್ಕೆ ಸರ್ವೆ ಮಾಡಲು ಮುಂದಾಗಿದೆ. ಈಗಾಗಿ ಈ ವರ್ಷ ವೈಟ್‍ಬೋರ್ಡ್ ಕಾರ್ಡ್ ಸಂಬಂಧ ಎಷ್ಟು ಕಾರ್ಡ್ ರದ್ದಾಗಲಿದೆ ಕಾದು ನೋಡಬೇಕಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್