ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕವಾಗಿವೆ: ಪ್ರತಾಪ್ ಸಿಂಹ

Public TV
1 Min Read

ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಅವರು ಎತ್ತಿರುವ ಪ್ರಶ್ನೆಗಳು ನೈತಿಕ ಹಾಗೂ ಕಾನೂನಾತ್ಮಕವಾಗಿವೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ, ಐಪಿಎಸ್ (IPS) ಅಧಿಕಾರಿ ಡಿ.ರೂಪಾ (D.Roopa) ಹಾಗೂ ಐಎಎಸ್ (IAS) ಆಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರ ನಡುವೆ ನಡೆಯುತ್ತಿರುವ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯೆ ಕೊಟ್ಟರು. ಡಿ.ರೂಪಾ ಎತ್ತಿರುವ ಪ್ರಶ್ನೆಗಳಿಗೆ ಸತ್ಯಶೋಧನೆ ನಡೆಸುವುದು ಪತ್ರಕರ್ತರ ಜವಾಬ್ದಾರಿ. ಕಮಿಟಿ ರಚಿಸಿ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವಂತೆ ಸರ್ಕಾರಕ್ಕೆ ಹೇಳಬೇಕಾದವರು ಪತ್ರಕರ್ತರು ಎಂದರು.

ಕೋವಿಡ್ ಸಮಯದಲ್ಲಿ ಚಾಮರಾಜನಗರದ ಆಕ್ಸಿಜನ್ ದುರಂತದಲ್ಲಿ ಒಂದೇ ದಿನ 24 ಮಂದಿ ಮೃತಪಟ್ಟಿದ್ದರು. ಅಂದು ಮೈಸೂರಿನ ಮೇಲೆ ಆರೋಪ ಬಂತು. ಬಳಿಕ ಆಕ್ಸಿಜನ್ ಒದಗಿಸುವ ಜವಾಬ್ದಾರಿಯನ್ನು ಉಸ್ತುವಾರಿ ಸಚಿವರು ಹಾಗೂ ಸಂಸದನಾದ ನಾನು ವಹಿಸಿಕೊಂಡೆವು. ಜಿಲ್ಲೆಯಲ್ಲಿ ಕೋವಿಡ್‍ಗೆ ಅನೇಕರು ಮೃತಪಟ್ಟಿದ್ದರು. ಆಗ ಸುಮ್ಮನೆ ವೀಡಿಯೋ ಕಾನ್ಫರೆನ್ಸ್ ಮಾಡಿ ಕಾಲಹರಣ ಮಾಡುವ ಬದಲು ತಪಾಸಣೆ ಮಾಡಬೇಕು ಎಂದು ಹೇಳಿದಾಗ ನಮ್ಮ ಮೇಲೆಯೇ ಆರೋಪಗಳು ಕೇಳಿ ಬಂದ್ದಿದ್ದವು ಎಂದು ನೆನಪಿಸಿಕೊಂಡರು. ಇದನ್ನೂ ಓದಿ:ನಿರ್ದೇಶಕ ಭಗವಾನ್ ನಿಧನಕ್ಕೆ ಸಿಎಂ, ಮಾಜಿ ಸಿಎಂ ಸಂತಾಪ

ಅದೇ ಪ್ರಶ್ನೆಗಳನ್ನು ಇಂದು ಡಿ.ರೂಪಾ ಎತ್ತಿದ್ದಾರೆ. ಹಾಸನದಲ್ಲಿ ಅವರಿದ್ದಾಗ ಏನೇನು ನಡೆದಿದೆ ಎಂದು ತಿಳಿದುಕೊಂಡು ಪ್ರಶ್ನಿಸುವ ಜವಬ್ದಾರಿ ಪತ್ರಕರ್ತರದ್ದು ಎಂದು ಹೇಳಿದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
1 Comment

Leave a Reply

Your email address will not be published. Required fields are marked *