ಮನೆಯಲ್ಲೇ ಹತ್ಯೆ ಆಗಿರೋದು ರಾಜ್ಯದ ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನೋದನ್ನ ತೋರಿಸ್ತಿದೆ: ಕರಂದ್ಲಾಜೆ

Public TV
1 Min Read

ಮಂಗಳೂರು: ಮನೆಯಲ್ಲೇ ಗೌರಿ ಲಂಕೇಶ್ ಹತ್ಯೆ ಆಗಿರುವುದು ರಾಜ್ಯದ ಕಾನೂನು ಸುವ್ಯವಸ್ಥೆ ಹೇಗಿದೆ ಎನ್ನುವುದನ್ನು ತೋರಿಸುತ್ತದೆ ಎಂದು ಹೇಳುವ ಮೂಲಕ ಮಾಜಿ ಸಚಿವೆ, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿ ಹಂತಕರನ್ನು ಇನ್ನೂ ಬಂಧಿಸಿಲ್ಲ. ಕೆಂಪಯ್ಯ ಮೂಲಕ ಸಿದ್ದರಾಮಯ್ಯ ಪೊಲೀಸರನ್ನು ಕಂಟ್ರೋಲ್ ಮಾಡುತ್ತಿದ್ದಾರೆ. ಡಿವೈಎಸ್‍ಪಿ ಗಣಪತಿ ಹತ್ಯೆ ವಿಚಾರದಲ್ಲಿ ಎಸಿಬಿ, ಸಿಐಡಿಯನ್ನು ದುರ್ಬಳಕೆ ಮಾಡಿಕೊಂಡಿದ್ದು, ಸಿಬಿಐ ತನಿಖೆಯಿಂದ ರಾಜ್ಯ ಸರಕಾರದ ಕೈವಾಡ ಹೊರಬರಲಿದೆ ಎಂದು ತಿಳಿಸಿದರು.

ಬಿಜೆಪಿ ಮಂಗಳೂರು ಚಲೋ ರ‍್ಯಾಲಿ ಬಗ್ಗೆ ಮಾತನಾಡಿದ ಅವರು, ರ‍್ಯಾಲಿಯನ್ನು ಹತ್ತಿಕ್ಕುವ ಯತ್ನವನ್ನು ಸರ್ಕಾರ ಮಾಡುತ್ತಿದೆ ಸಿದ್ದರಾಮಯ್ಯ ಸರ್ಕಾರಕ್ಕೆ ಇದು ಎಚ್ಚರಿಕೆ ಗಂಟೆಯಾಗಲಿದೆ. ರಮಾನಾಥ ರೈಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಗುರುವಾರದ ಕಾರ್ಯಕ್ರಮವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಪಿಎಫ್‍ಐ, ಎಸ್‍ಡಿಪಿಐ ನಿಷೇಧಿಸಬೇಕು ಎಂದು ಅವರು ಆಗ್ರಹಿಸಿದರು.

ಗಣಪತಿ ಪ್ರಕರಣದಲ್ಲಿ ಸಚಿವ ಜಾರ್ಜ್ ಈಗಲೇ ರಾಜಿನಾಮೆ ನೀಡಬೇಕು. ರಮಾನಾಥ ರೈ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಟೀಕಿಸಿದರು.

 

 

Share This Article
Leave a Comment

Leave a Reply

Your email address will not be published. Required fields are marked *